ಲಕ್ಷ್ಯ ಸೇನ್ 
ಕ್ರೀಡೆ

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಲಕ್ಷ್ಯ ಸೇನ್ ಅವರ ಪೋಷಕರು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಬೆಂಗಳೂರು: ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಮತ್ತು ಅವರ ಸಹೋದರ ಚಿರಾಗ್ ಸೇನ್ ಅವರ ವಿರುದ್ಧದ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಲಕ್ಷ್ಯ ಸೇನ್ ಅವರ ಪೋಷಕರು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಅರ್ಜುನ ಪ್ರಶಸ್ತಿ ಪುರಸ್ಕೃತ ಲಕ್ಷ್ಯ ಸೇನ್ ಮತ್ತು ಚಿರಾಗ್ ಅವರ ತಂದೆ ಧೀರೇಂದ್ರ ಕುಮಾರ್ ಸೇನ್ ಅವರು, ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಾರೆ ಮತ್ತು ಅವರ ತಾಯಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉದ್ಯೋಗಿಯಾಗಿದ್ದಾರೆ.

2022 ರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಾಗರಾಜ ಎಂಜಿ ಎಂಬವರು ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಅವರ ವಿರುದ್ಧ ದಾಖಲಿಸಲಾದ ಕೇಸ್ ರದ್ದುಗೊಳಿಸುವಂತೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿ ಉಮಾ, ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸ್ಥಗಿತಗೊಳಿಸಲು ಅಥವಾ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ನನಗೆ ಯಾವುದೇ ಸೂಕ್ತ ಕಾರಣ ಸಿಗುತ್ತಿಲ್ಲ. ನ್ಯಾಯಾಲಯದ ಮುಂದೆ ಸಾಕಷ್ಟು ಸಾಮಗ್ರಿಗಳಿವೆ, ಅವು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ಅಡಿಯಲ್ಲಿ ಪಡೆದ ದಾಖಲೆಗಳಾಗಿವೆ". ಇಂತಹ ಸಂದರ್ಭದಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನನಗೆ ಯಾವುದೇ ಕಾರಣ ಸಿಗುತ್ತಿಲ್ಲ" ಎಂದು ಹೇಳಿ, ಆರೋಪಿಗಳು ಸಲ್ಲಿಸಿದ್ದ ಮೂರು ಅರ್ಜಿಗಳನ್ನು ನ್ಯಾಯಮೂರ್ತಿ ಉಮಾ ಅವರು ವಜಾಗೊಳಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಧೀರೇಂದ್ರ ಕುಮಾರ್ ಸೇನ್(ಎ1), ಅವರ ಪತ್ನಿ ನಿರ್ಮಲಾ ಧೀರೇಂದ್ರ ಸೇನ್(ಎ5), ಅವರ ಪುತ್ರರಾದ ಚಿರಾಗ್ (ಎ2) ಮತ್ತು ಲಕ್ಷ್ಯ (ಎ3), ಮತ್ತು ಅವರ ತರಬೇತುದಾರ ಮತ್ತು ಸಂಘದ ಉದ್ಯೋಗಿ ಯು. ವಿಮಲ್ ಕುಮಾರ್(ಎ5) ಅವರು ಕೇಸ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT