ಪುಷ್ಕರ್ ಸಿಂಗ್ ಧಾಮಿ-ನರೇಂದ್ರ ಮೋದಿ TNIE
ಕ್ರೀಡೆ

2036ರ ಒಲಿಂಪಿಕ್ಸ್ ಆಯೋಜನೆಗೆ ಭಾರತ ಶತಪ್ರಯತ್ನ: 38ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿ ಪ್ರಧಾನಿ ಮೋದಿ ಹೇಳಿಕೆ

ಹಾಕಿಯ ಹಳೆಯ ವೈಭವದ ದಿನಗಳು ಮರಳುತ್ತಿವೆ ಎಂದು ಹೇಳಿದರು. ನಮ್ಮ ಖೋ-ಖೋ ತಂಡ ವಿಶ್ವಕಪ್ ಗೆದ್ದಿದೆ. ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದರು. ಒಂದು ದೇಶ ಕ್ರೀಡೆಯಲ್ಲಿ ಪ್ರಗತಿ ಸಾಧಿಸಿದಾಗ, ಆ ದೇಶದ ವಿಶ್ವಾಸಾರ್ಹತೆ ಮತ್ತು ವ್ಯಕ್ತಿತ್ವವೂ ಹೆಚ್ಚಾಗುತ್ತದೆ ಎಂದರು.

ನವದೆಹಲಿ: ಉತ್ತರಾಖಂಡದಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದಕ್ಕೂ ಮೊದಲು, ಅಲ್ಮೋರಾ ನಿವಾಸಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಮತ್ತು ರಾಷ್ಟ್ರೀಯ ಕ್ರೀಡಾಕೂಟದ ತೇಜಸ್ವಿನಿ ಜ್ಯೋತಿಯನ್ನು ಪ್ರಧಾನಿಗೆ ಹಸ್ತಾಂತರಿಸಿದರು. ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸುಮಾರು 10 ಸಾವಿರ ಆಟಗಾರರು 32 ಕ್ರೀಡೆಗಳಲ್ಲಿ ಪದಕ ಗೆಲ್ಲಲು ಸ್ಪರ್ಧಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ದೇಶದಲ್ಲಿ ಸುಂದರವಾದ ಕ್ರೀಡಾ ಪುಷ್ಪಗುಚ್ಛವನ್ನು ಸಿದ್ಧಪಡಿಸಲಾಗುತ್ತಿದೆ. ಇದರಲ್ಲಿ ಪ್ರತಿ ಋತುವಿನಲ್ಲಿ ಹೂವುಗಳು ಅರಳುತ್ತವೆ ಮತ್ತು ಪಂದ್ಯಾವಳಿಗಳು ನಿರಂತರವಾಗಿ ನಡೆಯುತ್ತವೆ ಎಂದು ಹೇಳಿದರು.

ಡೆಹ್ರಾಡೂನ್‌ನಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಹಾಕಿಯ ಹಳೆಯ ವೈಭವದ ದಿನಗಳು ಮರಳುತ್ತಿವೆ ಎಂದು ಹೇಳಿದರು. ನಮ್ಮ ಖೋ-ಖೋ ತಂಡ ವಿಶ್ವಕಪ್ ಗೆದ್ದಿದೆ. ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದು, ಜಗತ್ತನ್ನೇ ಅಚ್ಚರಿಗೊಳಿಸಿದರು. ಒಂದು ದೇಶ ಕ್ರೀಡೆಯಲ್ಲಿ ಪ್ರಗತಿ ಸಾಧಿಸಿದಾಗ, ಆ ದೇಶದ ವಿಶ್ವಾಸಾರ್ಹತೆ ಮತ್ತು ವ್ಯಕ್ತಿತ್ವವೂ ಹೆಚ್ಚಾಗುತ್ತದೆ. ಆಟಗಾರರು ತಮ್ಮ ಸಾಮರ್ಥ್ಯಗಳನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ನಾವು ಹೆಚ್ಚು ಹೆಚ್ಚು ಅವಕಾಶಗಳನ್ನು ಸೃಷ್ಟಿಸುತ್ತಿದ್ದೇವೆ ಎಂದರು.

ಈ ಯಶಸ್ಸು ಭಾರತದಲ್ಲಿ ಕ್ರೀಡೆಗಳು ಇನ್ನು ಮುಂದೆ ಪಠ್ಯೇತರ ಚಟುವಟಿಕೆಯಾಗಿ ಉಳಿದಿಲ್ಲ. ಬದಲಾಗಿ ಅದು ಪ್ರಮುಖ ವೃತ್ತಿ ಆಯ್ಕೆಯಾಗಿ ಹೊರಹೊಮ್ಮಿದೆ ಎಂಬುದನ್ನು ತೋರಿಸುತ್ತದೆ ಎಂದು ಪ್ರಧಾನಿ ಹೇಳಿದರು. ನಮ್ಮ ಆಟಗಾರರು ದೊಡ್ಡ ಗುರಿಗಳೊಂದಿಗೆ ಮುನ್ನಡೆಯುವಂತೆಯೇ, ನಮ್ಮ ದೇಶವೂ ದೊಡ್ಡ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. 2036ರ ಒಲಿಂಪಿಕ್ಸ್ ಅನ್ನು ಆಯೋಜಿಸಲು ಭಾರತ ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದೆ ಮತ್ತು ಭಾರತದಲ್ಲಿ ಒಲಿಂಪಿಕ್ಸ್ ನಡೆದಾಗ, ಅದು ಭಾರತೀಯ ಕ್ರೀಡೆಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದರು.

ಇಲ್ಲಿ ಅನೇಕ ದಾಖಲೆಗಳು ಮುರಿಯಲ್ಪಡುತ್ತವೆ, ಹೊಸ ದಾಖಲೆಗಳು ನಿರ್ಮಾಣವಾಗುತ್ತವೆ. ಆದರೆ ಈ ರಾಷ್ಟ್ರೀಯ ಕ್ರೀಡಾಕೂಟವು ಕೇವಲ ಕ್ರೀಡಾ ಸ್ಪರ್ಧೆಯಲ್ಲ, ಬದಲಾಗಿ 'ಏಕ್ ಭಾರತ್, ಶ್ರೇಷ್ಠ ಭಾರತ್' ಗೆ ಬಲವಾದ ವೇದಿಕೆಯಾಗಿದೆ ಎಂದು ಅವರು ಹೇಳಿದರು. ನಿಮ್ಮ ಪದಕವು ಭಾರತದ ಏಕತೆ ಮತ್ತು ಶ್ರೇಷ್ಠತೆಯ ಹೊಳಪನ್ನು ಪ್ರತಿಬಿಂಬಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲು ನೀವು ಪ್ರಯತ್ನಿಸಬೇಕು. ಆರೋಗ್ಯಕರ ದೇಹದಿಂದ ಮಾತ್ರ ಆರೋಗ್ಯಕರ ಮನಸ್ಸು ಮತ್ತು ಆರೋಗ್ಯಕರ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಮೋದಿ ಹೇಳಿದರು.

ಯುಸಿಸಿ ಜಾರಿಗೆ ತಂದಿದ್ದಕ್ಕಾಗಿ ಉತ್ತರಾಖಂಡ ಸರ್ಕಾರವನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಈ ಐತಿಹಾಸಿಕ ಹೆಜ್ಜೆಗಾಗಿ ಉತ್ತರಾಖಂಡದ ಬಿಜೆಪಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಯುಸಿಸಿಯನ್ನು ಜಾತ್ಯತೀತ ನಾಗರಿಕ ಸಂಹಿತೆ ಎಂದು ಬಣ್ಣಿಸಿದರು. ಈ ಕಾನೂನು ನಮ್ಮ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರ ಗೌರವಾನ್ವಿತ ಜೀವನಕ್ಕೆ ಆಧಾರವಾಗಲಿದೆ ಮತ್ತು ಸಂವಿಧಾನದ ಚೈತನ್ಯವನ್ನು ಸಹ ಬಲಪಡಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

SCROLL FOR NEXT