ಸೈನಾ ನೆಹ್ವಾಲ್‌ ಮತ್ತು ಪರುಪಳ್ಳಿ ಕಶ್ಯಪ್ 
ಕ್ರೀಡೆ

ಸೈನಾ ನೆಹ್ವಾಲ್‌-ಪರುಪಳ್ಳಿ ಕಶ್ಯಪ್ ದಾಂಪತ್ಯ ಜೀವನದಲ್ಲಿ ಬಿರುಕು: ವಿಚ್ಛೇದನ ಘೋಷಣೆ

ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚನೆಯ ನಂತರ ನಾನು ಹಾಗೂ ಕಶ್ಯಪ್ ಪರುಪಳ್ಳಿ ಬೇರೆಯಾಗಲು ನಿರ್ಧರಿಸಿದ್ದೇವೆ.

ನವದೆಹಲಿ: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಪರುಪಳ್ಳಿ ಕಶ್ಯಪ್ ನಡುವಿನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ದಂಪತಿಗಳು ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸೈನಾ ನೆಹ್ವಾಲ್ ಅವರು ಈ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚನೆಯ ನಂತರ ನಾನು ಹಾಗೂ ಕಶ್ಯಪ್ ಪರುಪಳ್ಳಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮಗಾಗಿ ಹಾಗೂ ಪರಸ್ಪರ ಶಾಂತಿ, ಬೆಳವಣಿಗೆ ಮತ್ತು ಗುಣಪಡಿಸುವಿಕೆಯನ್ನು ಆರಿಸಿಕೊಳ್ಳುತ್ತಿದ್ದೇವೆ . ಹಲವು ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಮತ್ತು ಗೌರವಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಸೈನಾ ನೆಹ್ವಾಲ್ ಅವರು ಹೇಳಿದ್ದಾರೆ.

ಸೈನಾ ಅವರು ಬಹಿರಂಗವಾಗಿಯೇ ಈ ನಿರ್ಧಾರ ತಿಳಿಸಿದರೆ ಕಶ್ಯಪ್‌ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ, ಪೋಸ್ಟ್‌ ಹಾಕಿಕೊಂಡಿಲ್ಲ.

2018ರಲ್ಲಿ ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು ಸೈನಾ ನೆಹ್ವಾಲ್ ಅವರು ವಿವಾಹವಾಗಿದ್ದರು. ಹ್ವಾಲ್ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು.

ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್‌ ಇನ್ನೂ ನಿವೃತ್ತಿ ಹೇಳಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT