ಚಾಂಪಿಯನ್ ಭಾರತ ಹಾಕಿ ತಂಡ 
ಕ್ರೀಡೆ

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!

ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ನವದೆಹಲಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇತಿಹಾಸ ಬರೆದಿದ್ದು ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ.

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ (Harmanpreet Singh) ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಸಂಪೂರ್ಣ ಪ್ರಾಬಲ್ಯ ಮೆರೆದ ಭಾರತ

ಟೂರ್ನಿಯ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾ ಮೇಲೆ ಅಕ್ಷರಶಃ ಸವಾರಿ ಮಾಡಿತು. ಕೊರಿಯಾ ತಂಡಕ್ಕೆ ಯಾವುದೇ ಅವಕಾಶ ನೀಡದ ಭಾರತ ತಂಡ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು.

ನಾಲ್ಕನೇ ಬಾರಿಗೆ ಚಾಂಪಿಯನ್

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ.

ವಿಶ್ವಕಪ್ ಗೆ ಅರ್ಹತೆ

ಈ ಗೆಲುವಿನೊಂದಿಗೆ, ಭಾರತ ತಂಡ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

SCROLL FOR NEXT