ಥ್ರೋಬಾಲ್ ಚಾಂಪಿಯನ್‌ಗಳಿಗೆ ಅಭಿನಂದಿಸಿದ ಸಿಎಂ 
ಕ್ರೀಡೆ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್‌ಗಳಿಗೆ ಭವ್ಯ ಸ್ವಾಗತ

ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‌ನಲ್ಲಿ ಮಲೇಷ್ಯಾವನ್ನು ಸೋಲಿಸಿದ ಭಾರತ ತಂಡ, 25-23, 23-25, 25-21 ಅಂತರದಲ್ಲಿ ಜಯಗಳಿಸಿತು.

ಬೆಂಗಳೂರು: ಕಾಂಬೋಡಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಫೆಬ್ರವರಿ 16 ರಂದು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‌ನಲ್ಲಿ ಮಲೇಷ್ಯಾವನ್ನು ಸೋಲಿಸಿದ ಭಾರತ ತಂಡ, 25-23, 23-25, 25-21 ಅಂತರದಲ್ಲಿ ಜಯಗಳಿಸಿತು. ಬೆಂಗಳೂರಿನ ಎಂಡೀವರ್ಸ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸಹ ತಂಡದಲ್ಲಿದ್ದಾರೆ.

ಪೋಷಕರು, ಶಾಲಾ ಆಡಳಿತ ಮಂಡಳಿ ಮತ್ತು ಬೆಂಬಲಿಗರು ತಂಡವನ್ನು ಬರಮಾಡಿಕೊಂಡರು. ಶಾಲೆಯ ಅಧ್ಯಕ್ಷ ಎಂ.ಎಲ್. ಶಿವಶಂಕರ್ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿ, ಗೌರವಿಸಿದರು.

ನಂತರ ಭಾರತ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಪಂದ್ಯಾವಳಿಯ ಅನುಭವವನ್ನು ಹಂಚಿಕೊಂಡಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ತಂಡವನ್ನು ಅಭಿನಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ-Video

ಎಂಗೇಜ್‌ಮೆಂಟ್‌ ಮಾಡಿಕೊಂಡ ʻಗಿಚ್ಚಿ ಗಿಲಿ ಗಿಲಿʼ ಖ್ಯಾತಿಯ ಚಿಲ್ಲರ್ ಮಂಜು; ಹುಡುಗಿ ಯಾರು?

ಆರೋಗ್ಯ ವಿಮೆ ಕೊಳ್ಳುವ ಮುನ್ನ ಗಮನಿಸಬೇಕಾದ ಅಂಶಗಳು (ಹಣಕ್ಲಾಸು)

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷರು ಹೇಳಿದ್ದು ಹೀಗೆ...

SCROLL FOR NEXT