ಸಾಪ್ತಾಹಿಕಪ್ರಭ

ಗಾಂಧಿಯೂ ಕಾಗೆಯೂ ನಾನೂ

ನೋಡಲು ಚಂದ ಇಲ್ಲವಾದರೂ
ಬಣ್ಣವು ಕಪ್ಪು ಆಗಿದ್ದರೂ,
ನೋಟವು ಓರೆ ಆಗಿದ್ದರೂ
ಸ್ವರವು ತೀರಾ ಒರಟಾದರೂ
ಕಾಗೆಗಳು ಬಡಪಾಯಿಗಳು: ಅಮ್ಮ ಹೇಳಿದ
ಮಾತುಗಳನ್ನು ಇಂದಿಗೂ ನೆನೆಯುತ್ತೇನೆ ನಾನು
ಆದರೂ ಇಂದೊಂದು ಕಾಗೆಗೆ ಕಲ್ಲೆಸೆದೆ-
ನೆಂಬುದರ ಪಾಪವನ್ನು ಹೊರುತ್ತಿರುವೆನು ನಾನು

'ಮಂಡಿಯವರೆಗಿನ ಪಂಚೆಯನ್ನುಟ್ಟು,
ಕೋಲನ್ನೂರುತ್ತ ನಡೆದ ಆ ಅಜ್ಜ
ಮುಂದಿನ ಸಾಲಿನ ಹಲ್ಲುಗಳೆರಡಿಲ್ಲವಾದರೂ
ಮುಗುಳುನಗೆಯ ಚೆಲುವಿರುವ ಅಜ್ಜ
ಸ್ವಾತಂತ್ರ್ಯ ಎಂಬ ಪವಿತ್ರ ಮಂತ್ರವನ್ನು ನಮ್ಮ
ನಾಲಿಗೆಯಲ್ಲಿ ಬರೆದು ಅದನ್ನು ಹೇಳಿಸಿದನು  
ನಮ್ಮಿಂದ ದಟ್ಟಡಿಯನ್ನು ಇಡಿಸಿದನು,
ನಮಗೋಸುಗ ಪ್ರಾರ್ಥಿಸಿದನು,
ನಮಗೋಸುಗ ಗುಂಡಿಗೆ ಬಲಿಯಾದನು!
ನಾವು ಮರೆಯಬಾರದೆಂದಿಗೂ...!'
ಅಪ್ಪ ಹೇಳಿದ ಆ ಕಥೆ ಪೂರಾ
ಎಂದೂ ನೆನೆಯುತ್ತೇನೆ ನಾನು
ಆದರೂ ಗಾಂಧೀ ಪ್ರತಿಮೆಗೆ ಕಲ್ಲೆಸೆದೆ-
ನೆಂಬುದರ ಪಾಪವನ್ನು ಹೊರುತ್ತಿದ್ದೇನೆ ನಾನು

ನಗರದ ಕೂಡುಮಾರ್ಗದ ನಾಲ್ಕಾಳು ಎತ್ತರದ  
ಕಲ್ಲುಕಟ್ಟೆಯೊಂದರ ಮೇಲೆ
ಕಳೆದ ಜಯಂತಿಯಂದು ಯಾರೋ ಹಾಕಿದ
ಉದ್ದದ ಹೂಹಾರದ ದಾರದ ಸಹಿತ
ತುಸು ಬಾಗಿಯೂ ಮುಂದಕ್ಕೆ ವಾಲಿಯೂ
ನಿಂತಿರುವ ಗಾಂಧೀಜಿಯ ಶಿರಸ್ಸಿನಲ್ಲಿ
ಕಾಗೆ ಕುಳಿತಿದೆ- ಹೇಲು ಹರಿದಿದೆ!
ಕೂಡುಮಾರ್ಗದಲ್ಲಿ ನಿಂತಿದ್ದೇನೆ ನಾನು
ಯೋಚಿಸಲೇನಿದೆ ಇನ್ನು!
 
ಈ ಕೈಯಿಂದ ಆ ಕಾಗೆಯ ಕಡೆಗೆ ಒಂದು ಕಲ್ಲೆಸೆದೆ
ಕಾಗೆ ಕಿರಿಚುತ್ತ ಹಾರಿಹೋಯ್ತು.
ಹೇಲು ಹರಿಯುವ ಗಾಂಧಿಯ ಶಿರಸ್ಸಿಗೆ
ಕಲ್ಲೆರಗುತ್ತದೆ. ಅದನು ಕಂಡು ಕೆಳಗೆ ನಿಂತು
ಕೈಕೈ ಹಿಸುಕಿದೆ ನಾನು!
ಅಗಲೂ ಅದೋ ಗಾಂಧಿಯ ಮೊಗದಲಿ ನಗು
ಅದರಾಚೆ ಕಾಗೆ ಕುಳಿತಿಹುದು!

ಆದರೂ ಇಂದೊಂದು ಕಾಗೆಗೆ ಕಲ್ಲೆಸೆದ
ಪಾಪವನು ಒಪ್ಪಿಕೊಳ್ಳುವೆ ನಾನು
ಆದರೂ ಗಾಂಧೀಜಿಯ ಪ್ರತಿಮೆಗೆ ಕಲ್ಲೆಸೆದ
ಪಾಪವನು ಹೊರುತ್ತಿರುವೆ ನಾನು!

- ಕೆ.ಕೆ.ನಾಯರ್
ಮೂಲ: ಓಎನ್‌ವಿ ಕುರುಪ್ (ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಕವಿ)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಜಾಹೀರಾತು!

I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪ

ಅತ್ಯಪರೂಪ, 135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜನವರಿಯಲ್ಲೇ 3 ದಿನ ಭಾರಿ ಮಳೆ

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...

ಬಳ್ಳಾರಿ ಫೈರಿಂಗ್: CBI ತನಿಖೆಗೆ ಪರಮೇಶ್ವರ್ ನಕಾರ! ಕುಮಾರಸ್ವಾಮಿಗೆ ತಿರುಗೇಟು! Video

SCROLL FOR NEXT