ಎನ್ ಡಿ ಎ ಸರ್ಕಾರವನ್ನು ವಿರೋಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಪಕ್ಷ 
ಪ್ರಧಾನ ಸುದ್ದಿ

ಎನ್ ಡಿ ಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ತೃಣಮೂಲ

ಆರು ತಿಂಗಳು ಪೂರೈಸಿದ ಬಿಜೆಪಿ/ಎನ್ ಡಿ ಎ ಸರ್ಕಾರವನ್ನು ವಿರೋಧ ಪಕ್ಷಗಳು...

ನವದೆಹಲಿ: ಆರು ತಿಂಗಳು ಪೂರೈಸಿದ ಬಿಜೆಪಿ/ಎನ್ ಡಿ ಎ ಸರ್ಕಾರವನ್ನು ವಿರೋಧ ಪಕ್ಷಗಳು ಸೋಮವಾರ ಲೋಕಸಭೆಯಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿವೆ. ಕೋಲ್ಕತ್ತಾದಲ್ಲಿ ಬಿಜೆಪಿ ನಡೆಸಿದ ಭರ್ಜರಿ ಪ್ರಚಾರ ಸಭೆಯಿಂದ ವಿಚಲಿತರಾಗಿರುವ ತೃಣಮೂಲ ಪಕ್ಷದ ಲೋಕಸಭಾ ಸದಸ್ಯರು ಅಮಿತ್ ಷಾ ವಿರುದ್ಧ 'ಸಹರಾ' ಎಂಬ ಶೀರ್ಷಿಕೆಯಿರುವ ಕೆಂಪು ಪುಸ್ತಕ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಹೆಸರು ಸಹರಾ ಸಂಸ್ಥೆಯ ಮುಖ್ಯಸ್ಥನ ದಿನಚರಿಯಲ್ಲಿ ಕಾಣಿಸಿಕೊಂಡಿದೆ ಎಂಬ ಆರೋಪದ ಮೇಲೆ ಅಮಿತ್ ಷಾ ಅವರನ್ನು ಕೂಡ ಆಪಾದಿತರ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿದರು.

ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷ, ಎನ್ ಡಿ ಎ ಸರ್ಕಾರದ ಯು-ಟರ್ನ್ ಗಳ ಬಗ್ಗೆ ಒಂದು ಪುಸ್ತಕವನ್ನು ತನ್ನ ಪಕ್ಷದ ಕಛೇರಿಯಲ್ಲಿ ಬಿಡುಗಡೆ ಮಾಡಿತು. ಅಧಿಕಾರಕ್ಕೆ ಬಂದಾಗಿಲಿಂದಲೂ ಆರು ತಿಂಗಳಲ್ಲಿ ಸರ್ಕಾರ ಬರಿ ಯು-ಟರ್ನ್ ಗಳನ್ನೇ ಮಾಡಿದೆ ಎಂಬ ಘೋಷಣೆಯುಳ್ಳ ಈ ಪುಸ್ತಕವನ್ನು ಇಂಗ್ಲಿಶ್ ಮತ್ತು ಇನ್ನಿತರ ಎಲ್ಲ ಪ್ರಾದೇಶಿಕ ಭಾಷೆಗಳಲ್ಲೂ ಬಿಡುಗಡೆ ಮಾಡಿದೆ.

೩೦ ಪುಟಗಳ ಈ ಪುಟ್ಟ ಪುಸ್ತಕದಲ್ಲಿ ಎನ್ ಡಿ ಎ ಸರ್ಕಾರ ತೆಗೆದುಕೊಂಡಿರುವ ೨೨ ಯು- ಟರ್ನ್ ಗಳ ವಿವರಗಳಿವೆ ಎಂದಿದ್ದಾರೆ ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT