ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ 
ಪ್ರಧಾನ ಸುದ್ದಿ

ಜಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: 2,15,000 ಪುಟಗಳ ದಾಖಲೆ ಸಲ್ಲಿಕೆ

ಮೇಲ್ಮನವಿಗಾಗಿ ಸಂಬಂಧಿತ ದಾಖಲೆ ಹಾಗೂ ಕಡತಗಳನ್ನು ಜಯ ಪರ ವಕೀಲರು ಸಲ್ಲಿಸಿದ್ದಾರೆ...

ಬೆಂಗಳೂರು: ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಶೇಷ ಕೋರ್ಟ್ನ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಇಂದು ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಲಾಯಿತು.

18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ ಕಳಗಂ ಪಕ್ಷದ ಕಾರ್ಯದರ್ಶಿಯಾಗಿರುವ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ, ಬೆಂಗಳೂರು ವಿಶೇಷ ನ್ಯಾಯಾಲಯ 4 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ, 100 ಕೋಟಿ ದಂಡವನ್ನು ವಿಧಿಸಿತ್ತು.

ಈ ಸಂಬಂಧ ಜಯಲಲಿತಾ ಅವರಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಜಯಲಲಿತಾ ಅವರಿಗೆ ಜಾಮೀನು ನೀಡಿತ್ತು. ಈ ಸಂದರ್ಭ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿತ ದಾಖಲೆಗಳನ್ನು ರಾಜ್ಯ ಹೈಕೋರ್ಟ್ಗೆ 3 ತಿಂಗಳಿನೊಳಗಾಗಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಜಯಲಲಿತಾ ಪರ ವಕೀಲರಿಗೆ ಆದೇಶ ಹೊರಡಿಸಿತ್ತು.

ಅದರಂತೆ ಇಂದು ರಾಜ್ಯ ಹೈಕೋರ್ಟ್ನಲ್ಲಿ ಮೇಲ್ಮನವಿಗಾಗಿ ಸಂಬಂಧಿತ ದಾಖಲೆ ಹಾಗೂ ಕಡತಗಳನ್ನು ಜಯ ಪರ ವಕೀಲರು ಸಲ್ಲಿಸಿದ್ದಾರೆ. ಪೇಪರ್ ಬುಕ್ ರೂಪದಲ್ಲಿ ದಾಖಲೆಗಳನ್ನು ತಯಾರಿಸಲಾಗಿದೆ.

ಕಳೆದ 2 ತಿಂಗಳಿನಿಂದ ಜಯಲಲಿತಾ ಸೇರಿದಂತೆ 4 ಮಂದಿ ಆರೋಪಿಗಳ ಹಿರಿಯ ವಕೀಲರಾದ ಕುಮಾರ್, ಸೆಂಥಿಲ್, ಅಶೋಕನ್, ಆರ್.ಅನ್ಬುಕರಸು, ದಿವಾಕರ್, ಸೆಲ್ವಕುಮಾರು ಒಳಗೊಂಡ ತಂಡ ಈ ಕಡತಗಳ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದರು ಎನ್ನಲಾಗಿದೆ.

ಇಂದು ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ, ಅವುಗಳಿಗೆ ನಿಗಧಿತ ಸಂಖ್ಯೆಗಳನ್ನು ನೀಡಲು 2 ದಿನಗಳು ಆಗಬಹುದೆಂದು ಮೂಲಗಳು ತಿಳಿಸಿವೆ. ಇದರಿಂಗಾಗಿ ಮುಂಬರುವ 17ನೇ ತಾರಿಖಿನಿಂದ ಜಯಲಲಿತಾ  ಸೇರಿದಂತೆ 4 ಮಂದಿ ಆರೋಪಿಗಳ ಮೇಲ್ಮನವಿ ಅರ್ಜಿ ಸಂಬಂಧಿತ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT