ನಿತಿನ್ ಗಡ್ಕರಿ 
ಪ್ರಧಾನ ಸುದ್ದಿ

ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ: ನಿತಿನ್ ಗಡ್ಕರಿ

ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್‌...

ನವದೆಹಲಿ:  ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್‌ನ ಪರವಾನಗಿ ರದ್ದು ಮಾಡಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರೊಂಗಿಗೆ ಮಾತನಾಡಿದ ಗಡ್ಕರಿ, ಕ್ಯಾಬ್ ಸೇವೆಗಳ ನಿಯಮ ನಿಬಂಧನೆಗಳನ್ನು ಉತ್ತಮ ಪಡಿಸಬೇಕೇ ವಿನಾ ಕ್ಯಾಬ್ ಸೇವೆಗೆ ನಿಷೇಧ ಹೇರುವುದು ಸರಿಯಲ್ಲ ಎಂದಿದ್ದಾರೆ.

ಕ್ಯಾಬ್ ಸಂಸ್ಥೆಯ ಪರವಾನಗಿ ರದ್ದು ಮಾಡಿ, ನಿಷೇಧ ಹೇರುವುದು ಸರಿಯಲ್ಲ. ನಾಳೆ  ಬಸ್ಸಿನಲ್ಲಿ ಇಂಥದ್ದೇ ಘಟನೆ ನಡೆದರೆ ಬಸ್ಸಿಗೆ ನಿಷೇಧ ಹೇರಲಾಗುತ್ತದೆಯೇ? ನಮ್ಮ ವ್ಯವಸ್ಥೆ ಬದಲಾಗಬೇಕು, ಚಾಲಕನಿಗೆ ಪರವಾನಗಿ ನೀಡುವಾಗ ಗಮನ ಹರಿಸಬೇಕು. ಅದೇ ವೇಳೆ ತಪ್ಪಿತಸ್ಥರನ್ನು ಬೇಗನೆ ಪತ್ತೆ ಹಚ್ಚುವಂತಹ ಡಿಜಿಟಲ್ ಸಿಸ್ಟಂನ್ನು ಅಳವಡಿಸಬೇಕು. ಇದಕ್ಕಾಗಿ
ಯಾವುದೇ ವ್ಯಕ್ತಿಯ ವಿವರ, ದಾಖಲೆಗಳನ್ನು ಬೇಗನೆ ಪಡೆಯುವಂತಹ ಡಿಜಿಟಲ್ ವ್ಯವಸ್ಥೆ ನಮ್ಮಲ್ಲಿರಬೇಕು ಎಂದು ಹೇಳಿದ್ದಾರೆ.

ಪರವಾನಗಿ ಇಲ್ಲದ ವೆಬ್ ಕಾರ್ಯಾಧಾರಿತ ಎಲ್ಲ ಕ್ಯಾಬ್‌ಗಳನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೂ ಪತ್ರ ಮೂಲಕ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT