ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮೀನು ಜಗಳ: ಬಿಹಾರದಲ್ಲಿ ನಾಲ್ಕು ಜನರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮೇಲ್ಜಾತಿಗೆ ಸೇರಿದ ಜನರ ಗುಂಪೊಂದು, ತಮ್ಮ ಜೊತೆ ಮೀನುಗಳನ್ನು ಹಂಚಿಕೊಳ್ಳಲು ನಿರಾಕರಿಸಿದ ...

ಪಾಟ್ನಾ: ಮೇಲ್ಜಾತಿಗೆ ಸೇರಿದ ಜನರ ಗುಂಪೊಂದು, ತಮ್ಮ ಜೊತೆ ಮೀನುಗಳನ್ನು ಹಂಚಿಕೊಳ್ಳಲು ನಿರಾಕರಿಸಿದ ನಾಲ್ಕು ಜನರನ್ನು ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಾಟ್ನಾ ಜಿಲ್ಲೆಯ ಅಯ್ಯಾರ ಗ್ರಾಮದ ಬಳಿ ಮೀನು ಹಿಡಿಯುವುದರಲ್ಲಿ ನಿರತರಾಗಿದ್ದ ಕಡು ಬಡವ ಜನಾಂಗ ಬೈಂದ್ ಸಮುದಾಯಕ್ಕೆ ಸೇರಿದ ನಾಲ್ಕು ಜನರನ್ನು ಭಾನುವಾರ ತಡ ರಾತ್ರಿಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಸರ್ಕಾರಕ್ಕೆ ಸೇರಿದ ಕೊಳದಲ್ಲಿ ಮೀನು ಹಿಡಿಯುತ್ತಿದ ಈ ನಾಲ್ಕು ಮಂದಿ ಮೀನುಗಳನ್ನು ಹಂಚಿಕೊಳ್ಳಲು ನಿರಾಕರಿಸಿದಾಗ, ಮೇಲ್ಜಾತಿಯ ಆಯುಧದಾರಿ ಗುಂಪು ಗುಂಡು ಹಾರಿಸಿ ಅವರನ್ನು ಕೊಂದಿದ್ದಾರೆ" ಎಂದು ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಕೊಲೆಗಳಿಂದ ಉದ್ರಿಕ್ತಗೊಂಡ ನೂರಾರು ಜನರು ಸೋಮವಾರ ರಸ್ತೆ ತಡೆ ನಡೆಸಿ, ಆಪಾದಿತರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಕೊಲೆಯಾದ ನಾಲ್ಕೂ ಜನ ಸಿ ಪಿ ಐ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಬೆಂಬಲಿಗರು ಎಂದು ತಿಳಿದು ಬಂದಿದ್ದು, ಪಾಲಿಗಂಜ್ ನಲ್ಲಿ ದಲಿತರ ಬೆಂಬಲದೊಂದಿಗೆ ಭದ್ರ ನೆಲೆ ಇರುವ ಪಕ್ಷವಾಗಿದೆ.

ಗಾಯಗೊಂಡಿರುವ ಒಬ್ಬನ ಹೇಳಿಕೆಯ ಆಧಾರದ ಮೇರೆಗೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಾಟ್ನಾದ ಹಿರಿಯ ಪೋಲೀಸ್ ಅಧಿಕಾರಿ ಜಿತೇಂದ್ರ ರಾಣಾ ತಿಳಿಸಿದ್ದಾರೆ.

ಅಪಾದಿತ ಕೊಲೆಗಾರರನ್ನು ಬಂದಿಸಲು ಪೋಲಿಸರು ಹಲವಾರು ಜಾಗಗಳಲ್ಲಿ ದಾಳಿ ನಡೆಸಿದ್ದು, ಜಿಲ್ಲಾಡಳಿತ ಘಟನೆ ನಡೆದ ಸ್ಥಳದಲ್ಲಿ ಬೀಡು ಬಿಟ್ಟಿದೆ ಎಂದು ರಾಣಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ