ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ಪ್ರಧಾನ ಸುದ್ದಿ

ಮನಮೋಹನ್ ಸಿಂಗ್ ಹೇಳಿಕೆ ದಾಖಲಿಸಿ: ಸಿಬಿಐಗೆ ಕೋರ್ಟ್ ಸೂಚನೆ

ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ ಮತ್ತು ಇತರರು ಭಾಗಿಯಾಗಿದ್ದಾರೆ ಎನ್ನಾಲಾಗಿರುವ

ನವದೆಹಲಿ: ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ ಮತ್ತು ಇತರರು ಭಾಗಿಯಾಗಿದ್ದಾರೆ ಎನ್ನಾಲಾಗಿರುವ ಕೋಲ್ ಬ್ಲಾಕ್ ಪ್ರಕರಣದ ವಾದ ವಿವಾದವನ್ನು ಆಲಿಸುತ್ತಿರುವ ವಿಶೇಷ ನ್ಯಾಯಾಲಯ, ಕಲ್ಲಿದ್ದಲು ಸಚಿವಾಲಯವನ್ನು ಹೊಂದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಸಿಬಿಐಗೆ ಮಂಗಳವಾರ ಸೂಚಿಸಿದೆ.

ವಿಶೇಷ ನ್ಯಾಯಾಧೀಶ ಭರತ್ ಪರಶರ್ ಈ ಸೂಚನೆ ನೀಡಿದ್ದು, ಸಿಬಿಐಗೆ ಈ ಪ್ರಕರಣದ ತನಿಖೆಯನ್ನು ಮುಂದುವರಿಸಲು ಸೂಚಿಸಿ, ಜನವರಿ ೨೭ಕ್ಕೆ ಕಲಾಪವನ್ನು ಮುಂದೂಡಿದೆ.

ಬಿರ್ಲಾ, ಮಾಜಿ ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಪಿ ಸಿ ಪಾರಖ್ ಮತ್ತಿತರನ್ನು ಕೋಲ್ ಬ್ಲಾಕ್ ಹಗರಣ, ಭ್ರಷ್ಟ್ರಾಚಾರ ಮತ್ತು ಅಪರಾಧ ಪಿತೂರಿಗಳ ಆರೋಪಗಳಿಗೆ ಅಕ್ಟೋಬರ್ ೨೦೧೩ ರಲ್ಲಿ ಸಿಬಿಐ ಆಪಾದಿತರೆಂದು ಪ್ರಕರಣ ದಾಖಲಿಸಿತ್ತು.

ಆದರೆ ಆಗಸ್ಟ್ ೨೮ ರಂದು "ತನಿಖೆಯ ವೇಳೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಾಧಾರಗಳು, ಎಫ್ ಐ ಆರ್ ನಲ್ಲಿ ಹೆಸರಿಸಿದವರ ವಿರುದ್ಧದ ದೋಷಾರೋಪಣೆಗಳನ್ನು ಸಮರ್ಥಿಸುವುದಿಲ್ಲ" ಎಂದು ಸಿಬಿಐ ತನಿಖೆಯ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು.

ಈ ಮೊದಲು ಕೋರ್ಟ್, ಸಿಬಿಐ ತನಿಖೆಯನ್ನು ಯಾವ ಆಧಾರದ ಮೇಲೆ ಮುಕ್ತಾಯ ಮಾಡಿತ್ತು ಮತ್ತು ಯಾವ ರೀತಿಯ ತನಿಖೆ ನಡೆಸಿತ್ತು ಎಂಬುದ ಸ್ಪಷ್ಟೀಕರಣದ ವಿವರ ಕೇಳಿತ್ತು. ಅಲ್ಲದೆ ಬಿರ್ಲಾ ಅವರ ಹಿಂಡಾಲ್ಕೊ ಸಂಸ್ಥೆಗೆ ಕಲ್ಲಿದ್ದಲು ಬ್ಲಾಕ್ ಗಳನ್ನು ಹಂಚುವಾಗ ಪಿತೂರಿ ನಡೆದಿದೆಯೇ ಎಂಬುದರ ಸ್ಪಷ್ಟೀಕರಣವನ್ನು ಕೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT