ಸುಷ್ಮಾ ಸ್ವರಾಜ್ 
ಪ್ರಧಾನ ಸುದ್ದಿ

ಉಗ್ರ ಕೃತ್ಯಗಳ ವಿರುದ್ಧ ಎಲ್ಲ ದೇಶಗಳು ಒಂದಾಗಬೇಕು: ಸುಷ್ಮಾ ಸ್ವರಾಜ್

ಸಿಡ್ನಿ ಒತ್ತೆಯಾಳು ಪ್ರಕರಣ ಮತ್ತು ಪೇಶಾವರ ಶಾಲೆಯಲ್ಲಿ ಉಗ್ರರು ನಡೆಸಿದ ಮಾರಣಹೋಮವನ್ನು ಖಂಡಿಸಿದ ವಿದೇಶಾಂಗ ಸಚಿವೆ...

ನವದೆಹಲಿ: ಸಿಡ್ನಿ ಒತ್ತೆಯಾಳು ಪ್ರಕರಣ ಮತ್ತು ಪೇಶಾವರ ಶಾಲೆಯಲ್ಲಿ ಉಗ್ರರು ನಡೆಸಿದ ಮಾರಣಹೋಮವನ್ನು ಖಂಡಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಯೋತ್ಪಾದನೆಯ ವಿರುದ್ದ ಜಗತ್ತಿನ ಎಲ್ಲ ರಾಷ್ಟ್ರಗಳು ಒಂದಾಗಬೇಕೆಂದು ಹೇಳಿದ್ದಾರೆ.

ಬುಧವಾರ ಸಂಸತ್‌ನ್ನುದ್ದೇಶಿಸಿದ ಮಾತನಾಡಿದ ಸುಷ್ಮಾ, ಈ ಎರಡೂ ಘಟನೆಗಳು ಹೋಲಿಕೆಗೆ ನಿಲುಕದ್ದು. ಇಂಥಾ ಘೋರ ಕೃತ್ಯಗಳನ್ನು ನಿಯಂತ್ರಿಸಲು ಎಲ್ಲರೂ ಒಗ್ಗಟ್ಟಾಗಬೇಕು.

ಮಂಗಳವಾರ ಪೇಶಾವರದ ಸೇನಾ ಶಾಲೆಯಲ್ಲಿ ಪಾಕಿಸ್ತಾನದ ತಾಲೀಬಾನ್ ಸಂಘಟನೆಗಳು 141 ಜನರ ಮಾರಣಹೋಮ ಮಾಡಿದವು ಅದರಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 132.  ಅದೇ ವೇಳೆ ಆಸ್ಟ್ರೇಲಿಯಾದ ಸಿಡ್ನಿಯ ಕೆಫೆಯೊಂದರಲ್ಲಿ ಉಗ್ರರು 17 ಮಂದಿಯನ್ನು 16 ಗಂಟೆಗಳ ಕಾಲ ಒತ್ತೆಯಾಳುಗಳನ್ನಾಗಿರಿಸಿದ್ದರು.

ಈ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಸಚಿವೆ, ಕಳೆದ ದಿನ ನಡೆದ ಈ ಎರಡೂ ಘಟನೆಗಳು ಬೇರೆ ಬೇರೆ. ಆದರೆ ಇಲ್ಲಿ ಅಟ್ಟಹಾಸ ಮೆರೆದದ್ದು ಭಯೋತ್ಪಾದನೆ. ಇವುಗಳನ್ನೆಲ್ಲ ನೋಡಿದಾಗ, ಭಯೋತ್ಪಾದನೆಯ ವಿರುದ್ಧ ಜಗತ್ತಿನ ರಾಷ್ಟ್ರಗಳೆಲ್ಲ ಒಗ್ಗೂಡಿ ನಿಲ್ಲಬೇಕಾದ ಸಮಯ ಬಂದಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT