ಬೆಳಗಾವಿ ಅಧಿವೇಶನ 
ಪ್ರಧಾನ ಸುದ್ದಿ

ಉಭಯ ಸದನಗಳ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ.

ಬೆಳಗಾವಿ: ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ. ಪ್ರತಿಪಕ್ಷ ಬಿಜೆಪಿ ಸದಸ್ಯರ ಧರಣಿಯ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಇಂದು ಬೆಳಗ್ಗೆ ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ ಸಚಿವರ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ರೈತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಜೆಡಿಎಸ್ ಶಾಸಕರು ಆಗ್ರಹಿಸಿದರು. ಆದರೆ, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಯಾವುದಕ್ಕೂ ಅವಕಾಶ ನೀಡದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಇನ್ನು ವಿಧಾನ ಪರಿಷತ್ತಿನಲ್ಲೂ ಬಿಜೆಪಿ ಕಳಂಕಿತ ಸಚಿವರ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಪ್ರತಿಪಕ್ಷಗಳ ಗದ್ದಲದ ನಡುವೆಯೂ ಕರ್ನಾಟಕ ಮರಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2014, ಗೋಹತ್ಯೆ ನಿಷೇಧ ಹಿಂಪೆಡಯುವ ವಿಧೇಯಕ ಹಾಗೂ ಕರ್ನಾಟಕ ಸ್ಟ್ಯಾಂಪ್ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸಹ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಬಳಿಕ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಕಲಾಪವನ್ನು ಹಾಳು ಮಾಡಿದ್ದೀರಿ, ನಿಮಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದ ಸಿಎಂ, ಬಿಜೆಪಿಯವರೇ ಭ್ರಷ್ಟಾಚಾರದ ನಿರ್ಮಾತೃಗಳು, ಬಿಜೆಪಿಯ ಏಳು ನಾಯಕರು ಜೈಲು ಹೋಗಿ ಬಂದಿದ್ದಾರೆ ಎಂದರು.

ಇನ್ನು ಸರ್ಕಾರದ ವಿರುದ್ಧ ಹರಿಹಾಯ್ದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ನಾವು ಈ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ ಆದರೆ ಭ್ರಷ್ಟ ಸಚಿವರ ಬಗ್ಗೆ ಚರ್ಚೆಗೆ ಅವಕಾಶ ಸಿಗದಿರುವುದು ಬೇಸರ ತಂದಿದೆ ಎಂದರು. ಅಲ್ಲದೆ ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ಆರೋಪಿಸಿದರು.

ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ
ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ತುಂಬಾ ನಿರೀಕ್ಷೆಯಿಂದ ಅಧಿವೇಶನ ಆರಂಭಿಸಿದ್ದೇವು. ಆದರೆ ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ. ಶೇ.60ರಷ್ಟು ತೃಪ್ತಿ ತಂದಿದೆ ಎಂದು ಹೇಳಿದರು. ಅಲ್ಲದೆ ನಾನು ಹಿರಿಯನಿದ್ದೇನೆ, ಸಾಕಷ್ಟು ಅನುಭವ ಇದೆ. ಹೀಗಾಗಿ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT