ಗಾಂಧಿ ಮತ್ತು ಗೋಡ್ಸೆ 
ಪ್ರಧಾನ ಸುದ್ದಿ

ಗೋಡ್ಸೆ ಚಲನಚಿತ್ರ ಜ.30ಕ್ಕೆ ಬಿಡುಗಡೆ

ದೇಶಾದ್ಯಂತ ನಾಥೂರಾಮ್ ಗೋಡ್ಸೆ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ನಂತರ...

ಮುಂಬೈ: ದೇಶಾದ್ಯಂತ ನಾಥೂರಾಮ್ ಗೋಡ್ಸೆ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ನಂತರ, ಅಖಿಲ ಭಾರತೀಯ ಹಿಂದೂ
ಮಹಾಸಭಾ ಈಗ ಮಹಾತ್ಮಾಗಾಂಧಿ ಹತ್ಯೆಯ ಬಗ್ಗೆಯಿರುವ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.
ಮೂಲಗಳ ಪ್ರಕಾರ ಹಿಂದೂ ಮಹಾಸಭೆ ದೇಶ್ ಭಕ್ತ್ ನಾಥೂರಾಮ್ ಗೋಡ್ಸೆ  ಎಂಬ ಚಲನಚಿತ್ರವನ್ನು ಜನವರಿ 30 ರಂದು ಬಿಡುಗಡೆ ಮಾಡಲು ನಿರ್ಧರಿಸಿದೆ. 1948, ಜನವರಿ 30ರಂದು ಗೋಡ್ಸೆ ಗಾಂಧಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದನು. ಅದೇ ದಿನ ಚಿತ್ರ ಬಿಡುಗಡೆ ಮಾಡಲು ಮಹಾಸಭಾ ತೀರ್ಮಾನಿಸಿರುವುದಾಗಿ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮುನ್ನಾ ಕುಮಾರ್ ಶರ್ಮಾ ಹೇಳಿದ್ದಾರೆ.
ಗೋಡ್ಸೆ ಬಗ್ಗೆ ತಯಾರಾಗುತ್ತಿರುವ ಡಾಕ್ಯುಮೆಂಟರಿ ಸಿನಿಮಾದಲ್ಲಿ ಗೋಡ್ಸೆ ದೇಶಕ್ಕಾಗಿ ಏನೆಲ್ಲ ಮಾಡಿದರು ಹಾಗು ಭಾರತದಲ್ಲಿ ಗಾಂಧಿ ಹಿಂದೂಗಳ ವಿರುದ್ಧ ಹೇಗೆ ಕೆಲಸ ಮಾಡುತ್ತಿದ್ದರು ಎಂಬುದನ್ನು ಚಿತ್ರಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಆಳ್ವಿಕೆಯಿದ್ದ ಕಾರಣ ಗೋಡ್ಸೆಯನ್ನು ತಪ್ಪಿತಸ್ಥ ಎಂದು ಮಾಧ್ಯಮಗಳು ಬಿಂಬಿಸಿದವು. ಆದರೆ ಈಗ ನಮ್ಮಲ್ಲಿ ನರೇಂದ್ರ ಮೋದಿಯವರ ಆಳ್ವಿಕೆ ಇದೆ.  ಗೋಡ್ಸೆ.ಯನ್ನು ನಕಾರಾತ್ಮವಾಗಿ ಬಿಂಬಿಸಿದ್ದನ್ನು ಸರಿಮಾಡಲು ಇದೊಳ್ಳೆ ಸಮಯ ಎಂದಿದ್ದಾರೆ ಶರ್ಮಾ.
ಪ್ರಸ್ತುತ ಸಿನಿಮಾದ ಉದ್ದೇಶವೇನು? ಎಂದು ಕೇಳಿದಾಗ, ಮುಂದಿನ ಜನಾಂಗಕ್ಕೆ ಗೋಡ್ಸೆ ದೇಶಕ್ಕಾಗಿ ಮಾಡಿದ ಕೆಲಸಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಶರ್ಮಾ ಉತ್ತರಿಸಿದ್ದಾರೆ. 
ವಾರಗಳ ಹಿಂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗೋಡ್ಸೆಗೆ ಬಹುಪರಾಕ್ ಹೇಳುವ ಕಾರ್ಯಕ್ರಮಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT