ಪೇಶಾವಾರ್ ದಾಳಿಯ ಒಂದು ದೃಷ್ಯ 
ಪ್ರಧಾನ ಸುದ್ದಿ

ಸಂಜೋತ ರೈಲು ಸ್ಫೋಟ ಪ್ರಕರಣದ ಬಗ್ಗೆ ಭಾರತ ಪ್ರಗತಿ ತೋರಿಸಬೇಕು: ಪಾಕಿಸ್ತಾನ

ಮುಂಬೈ ೨೬/೧೧ ಭಯೋತ್ಪಾದನಾ ದಾಳಿಯ ಪ್ರಮುಖ ಆರೋಪಿ ಜಾಕಿರ್ ರೆಹಮಾನ್ ಲಕ್ವಿ ಬಿಡುಗಡೆಯಾಗಿಲ್ಲ. ..

ಇಸ್ಲಮಾಬಾದ್: ಮುಂಬೈ ೨೬/೧೧ ಭಯೋತ್ಪಾದನಾ ದಾಳಿಯ ಪ್ರಮುಖ ಆರೋಪಿ ಜಾಕಿರ್ ರೆಹಮಾನ್ ಲಕ್ವಿ ಬಿಡುಗಡೆಯಾಗಿಲ್ಲ. ಅವರಿನ್ನೂ ಬಂಧನದಲ್ಲಿದ್ದಾರೆ.  ಆದರೆ ಸಂಜೋತ ರೈಲು ಸ್ಫೋಟ ಪ್ರಕರಣದ ಬಗೆಗಿನ ತನಿಖೆಯ ಪ್ರಗತಿಯನ್ನು ಭಾರತ ತೋರಿಸಬೇಕು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಭದ್ರತಾ ಹಾಗೂ ವಿದೇಶಾಂಗ ಸಲಹೆಗಾರ ಸತ್ರಾಜ್ ಅಜೀಜ್ ಹೇಳಿದ್ದಾರೆ.

೨೦೦೭ ರಲ್ಲಿ ದೆಹಲಿ-ಲಾಹೋರ್ ಮಧ್ಯೆ ಸಂಚರಿಸುತ್ತಿದ್ದ ಸಂಜೋತ ರೈಲು ಸ್ಫೋಟದ ದುರ್ಘಟನೆಯಲ್ಲಿ ಸುಮೇರು ೭೦ ಜನ (ಹೆಚ್ಚಿನ ಸಂಖ್ಯೆ ಪಾಕಿಸ್ತಾನದವರು) ಮೃತಪಟ್ಟಿದ್ದರು.

ಪಾಕಿಸ್ತಾನ ಮತ್ತು ಆಪ್ಘಾನಿಸ್ತಾನದ ಗಡಿಯಲ್ಲಿ ಉಗ್ರರನ್ನು ಮಟ್ಟ ಹಾಕಲು ಎರಡೂ ದೇಶದ ಸೇನೆ ಜಂಟಿ ಕಾರ್ಯಾಚರಣೆ ನಡೆಸಲಿವೆ ಎಂದು ಕೂಡ ಆಜೀಜ್ ತಿಳಿಸಿದ್ದಾರೆ.

ಪಾಕಿಸ್ತಾನದ ಪೇಶಾವರದ ಸೇನಾ ಶಾಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ೧೩೨ ಮಕ್ಕಳು ಸೇರಿದಂತೆ ಸುಮಾರು ೧೪೦ ಜನ ಮೃತಪಟ್ಟ ಹಿನ್ನಲೆಯಲ್ಲಿ,  ಇದು "ಪಾಕಿಸ್ತಾನ ೯/೧೧" ಎಂದಿದ್ದ ಆಜೀಜ್, ಉಗ್ರಗಾಮಿಗಳನ್ನು ಹತ್ತಿಕ್ಕಲು ಆಪ್ಘಾನಿಸ್ತಾನದ ನಾಯಕತ್ವ ಪಾಕಿಸ್ತಾನ ಸೇನೆಗೆ ಸಂಪೂರ್ಣ ಬೆಂಬಲ ನೀಡಲು ಒಪ್ಪಿಗೆ ಕೊಟ್ಟಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT