ರಮೇಶ್ ಚೆನ್ನಿತ್ತಲ (ಸಂಗ್ರಹ ಚಿತ್ರ ) 
ಪ್ರಧಾನ ಸುದ್ದಿ

ಮತಾಂತರ ವಿವಾದ: ತನಿಖೆಗೆ ಕೇರಳ ಸರ್ಕಾರ ಆದೇಶ

ಭಾನುವಾರ ಕೇರಳದ ಆಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮಕ್ಕೆ ಸೇರಿದ ೩೦ ಮಂದಿ ಹಿಂದೂ ಧರ್ಮಕ್ಕೆ ...

ತಿರುವನಂತಪುರಂ: ಭಾನುವಾರ ಕೇರಳದ ಆಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮಕ್ಕೆ  ಸೇರಿದ ೩೦ ಮಂದಿ  ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಹಿರಿಯ ಪೊಲೀಸ್ ಅಧಿಕಾರಿಗೆ ಆದೇಶಿಸಿದ್ದಾರೆ.

ಆಲ್ಲಪ್ಪುಳ ಜಿಲ್ಲೆಯಲ್ಲಿ ಎಂಟು ಕ್ರೈಸ್ತ ಕುಟುಂಬಗಳು ಸೇರಿದಂತೆ ಒಟ್ಟು 30 ಜನರನ್ನು ವಿಶ್ವ ಹಿಂದೂ ಪರಿಷತ್ ಸಂಘಟನೆ (ವಿಹಿಂಪ) ಮತಾಂತರ ಮಾಡಿತ್ತು. ಅದೇ ವೇಳೆ ಕೊಲ್ಲಂನಲ್ಲಿ 5 ಜನರನ್ನು ಮತಾಂತರ ಮಾಡಲಾಗಿತ್ತು.

ಈ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಸಚಿವ ಚೆನ್ನಿತ್ತಲ ಹೆಚ್ಚುವರಿ ಪೊಲೀಸ್ ನಿರ್ದೇಶಕ ಎ. ಹೇಮಚಂದ್ರನ್ ಅವರಿಗೆ ಆದೇಶಿಸಲಾಗಿದೆ.

ಆದಾಗ್ಯೂ, ಭಾನುವಾರ ಹಿಂದೂ ಧರ್ಮಕ್ಕೆ ಮತಾಂತರಗೊಂಡವರು ತಮ್ಮ ಸ್ವ ಇಚ್ಛೆಯಿಂದ ಮತಾಂತರಗೊಂಡಿದ್ದಾರೆ. ಇದರಲ್ಲಿ ನಮ್ಮ ಸಂಘಟನೆಯ ಕೈವಾಡವಿಲ್ಲ ಎಂದು ವಿಹಿಂಪ ಹೇಳಿಕೆ ನೀಡಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಅನಿವಾರ್ಯತೆ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಇದೆ: ಯತೀಂದ್ರ ಸಿದ್ದರಾಮಯ್ಯ

ನಿಮಗಿದು ಗೊತ್ತಾ? ಪ್ರತಿಯೊಂದು ಜನ್ಮ ನಕ್ಷತ್ರಕ್ಕೂ ಒಂದು ಪ್ರಾಣಿಯ ಅಧಿಪತ್ಯ: ಅವುಗಳ ಗುಣ ಲಕ್ಷಣಗಳೇನು; ವಿವಾಹ ಹೊಂದಾಣಿಕೆಯಲ್ಲಿ 'ಯೋನಿ ಕೂಟ'ದ ಮಹತ್ವ!

MLC elections- ಇನ್ನು 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ: ಡಿ ಕೆ ಶಿವಕುಮಾರ್

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

SCROLL FOR NEXT