ಆಗ್ರಾದಲ್ಲಿ ನಡೆದ ಮರು ಮತಾಂತರದ ಚಿತ್ರ 
ಪ್ರಧಾನ ಸುದ್ದಿ

ಮರುಮತಾಂತರ ತಪ್ಪಲ್ಲ:ಶಿವಸೇನೆ

ಅನ್ಯಧರ್ಮಗಳಿಂದ ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡುವುದರಲ್ಲಿ ಏನೂ ತಪ್ಪಿಲ್ಲ ಎಂದಿರುವ ಶಿವಸೇನೆ "ಹಿಂದೂಗಳನ್ನು...

ಮುಂಬೈ: ಅನ್ಯಧರ್ಮಗಳಿಂದ ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡುವುದರಲ್ಲಿ ಏನೂ ತಪ್ಪಿಲ್ಲ ಎಂದಿರುವ ಶಿವಸೇನೆ "ಹಿಂದೂಗಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುವಾಗ ಮೌನವಾಗಿದ್ದದ್ದೇಕೆ" ಎಂದು ಟೀಕಿಸಿದೆ.

"ನೆನ್ನೆಯವರೆಗೂ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಲಾಗುತ್ತಿತ್ತು. ಆಗ ಅದನ್ನು ಯಾರೂ ಬಲಾತ್ಕಾರದ ಮತಾಂತರ ಎನ್ನಲಿಲ್ಲ. ಈಗ ಗಂಗಾ ಹಿಂದಕ್ಕೆ ಹರಿಯಲು ಪ್ರಾರಂಭಿಸಿದೆ, ಈಗ ಹುಸಿ ಜಾತ್ಯಾತೀತವಾದಿಗಳು ಮತಾಂತರ ತಪ್ಪು ಎನ್ನುತ್ತಿದ್ದಾರೆ" ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಅಭಿಪ್ರಾಯ ಮಂಡಿಸಿದೆ.

"ಮೊಘಲರ ಆಳ್ವಿಕೆಯಲ್ಲಿ ಬಲಾತ್ಕಾರದಿಂದ ಮುಸ್ಲಿಂ ಧರ್ಮಕ್ಕೆ ಮತಾತಂತರಗೊಂಡ ಹಿಂದೂಗಳ ಬಗ್ಗೆ ಹಾಗೂ ಬ್ರಿಟಿಷ್ ಮತ್ತು ಪೋರ್ಚುಗೀಸ್ ಆಳ್ವಿಕೆಯಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂದ ಹಿಂದೂಗಳ ಬಗ್ಗೆ ಈ ಜಾತ್ಯಾತೀತವಾದಿಗಳು ಏನೆನ್ನುತ್ತಾರೆ?" ಎಂದು ಸೇನಾ ಪ್ರಶ್ನಿಸಿದೆ.

"ಬಿಜೆಪಿ ಪಕ್ಷದ ಹಲವಾರು ಜನ ಈ ಮರು ಮತಾಂತರದ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ, ಆದರೆ ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದರಿಂದ ಉಭಯ ಸಂಕಟಕ್ಕೆ ಬಿದ್ದಿದ್ದಾರೆ" ಎಂದಿದೆ

ಅಯೋಧ್ಯೆದಲ್ಲಿ ಶೀಘ್ರವಾಗಿ ರಾಮ ದೇವಸ್ಥಾನವನ್ನು ಕಟ್ಟಬೇಕು ಎನ್ನುವ ಉತ್ತರ ಪ್ರದೇಶದ ರಾಜ್ಯಪಾಲ ರಾಮ ನಾಯಕ ಅವರ ಆಶಯಕ್ಕೂ ಶಿವಸೇನೆಯ ಸಹಮತವಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT