ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ದೆಹಲಿಯಲ್ಲಿ ಬಿಜೆಪಿಗೆ ನಾಯಕತ್ವದ ಕೊರತೆ: ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಬಿಜೆಪಿಗೆ ನಾಯಕತ್ವದ ಹಾಗೂ ಕಾರ್ಯಸೂಚಿಯ ಕೊರತೆ

ನವದೆಹಲಿ: ದೆಹಲಿಯಲ್ಲಿ ಬಿಜೆಪಿಗೆ ನಾಯಕತ್ವದ ಹಾಗೂ ಕಾರ್ಯಸೂಚಿಯ ಕೊರತೆ ಇದೆ ಎಂದಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್, ಬಿಜೆಪಿಯ "ಓಡಿಹೋದ ಮುಖ್ಯಮಂತ್ರಿ" ಅಪಪ್ರಚಾರವನ್ನು ಜನ ತಿರಸ್ಕರಿಸುತ್ತಾರೆ ಎಂದಿದ್ದಾರೆ.

"ದೆಹಲಿಯಲ್ಲಿ ಬಿಜೆಪಿ ನಶಿಸುತ್ತಿದ್ದೆ. ಯಾವುದೇ ಕಾರ್ಯಸೂಚಿಯಿಲ್ಲ. ನಾಯಕತ್ವವಿಲ್ಲ, ದಿಕ್ಕು ದೆಸೆ ಇಲ್ಲ. ಓಡಿಹೋದವನು' ಅಪಪ್ರಚಾರವನ್ನು ಜನ ತಿರಸ್ಕರಿಸುತ್ತಾರೆ" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಜಾರ್ಖಂಡ ಮತ್ತು ಜಮ್ಮು ಕಾಶ್ಮೀರದಲ್ಲಿ ಕೇಸರಿ ಪಕ್ಷ ತನ್ನ ನಿರೀಕ್ಷೆಯ ಸಾಮರ್ಥ್ಯ ತೋರಿಲ್ಲ. ದೆಹಲಿಯಲ್ಲೂ ಕೂಡ ಈ ಪಕ್ಷದ ನೆಲೆ ಕುಸಿಯುತ್ತಿದೆ ಎಂದಿದ್ದಾರೆ.  
 
ಖಾಸಗಿ ವಾಹಿನಿಯೊಂದರ ಅಭಿಪ್ರಾಯ ಸಂಗ್ರಹದ ವರದಿಯ ಪ್ರಸ್ತಾಪ ಮಾಡಿದ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ನೆಲೆ ವಿಸ್ತರಿಸಿಕೊಳ್ಳುತ್ತಿದೆ. ಬಿಜೆಪಿ ಪಕ್ಷಕ್ಕಿಂತ ತುಂಬಾ ಮುಂದಿದೆ ಎಂದಿದ್ದಾರೆ.

ಆ ಅಭಿಪ್ರಾಯ ಸಂಗ್ರಹದ ವರದಿ ಹೀಗಿದೆ.
ಎಎಪಿ  - ೪೮%
ಬಿಜೆಪಿ - ೪೦%
ಕಾಂಗ್ರೆಸ್ - ೭.೫%

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

West Asia Conflict: ಇರಾನ್ ಆರ್ಥಿಕ ಬೆನ್ನೆಲುಬಿಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ..!

West Asia Conflict ಎಫೆಕ್ಟ್: ಗಗನಕ್ಕೇರುತ್ತಿದೆ ಜಾಗತಿಕ ತೈಲ ದರ, $100 ತಲುಪಿದ ಕಚ್ಚಾ ತೈಲ ಬೆಲೆ..!

'ಬ್ರಿಟನ್ ತೊರೆಯದಂತೆ ಕಾನೂನುಬದ್ಧ ನಿರ್ಬಂಧ, ಭಾರತ ಸರ್ಕಾರದಿಂದ ನನಗೆ ಅನ್ಯಾಯವಾಗಿದೆ': ವಿಜಯ್ ಮಲ್ಯ