ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬುಡಕಟ್ಟಿನ ಸಿ ಎಂ ನೇಮಿಸಲು ಬಿಜೆಪಿ ವಿಫಲ: ನಿತೀಶ್ ಕುಮಾರ್ ಟೀಕೆ

ಜಾರ್ಖಂಡ್ ರಾಜ್ಯ ಸ್ಥಾಪನೆಗೊಂಡ ಪ್ರಾಂಭದಿಂದಲೂ ರಾಜ್ಯದ ಮುಖ್ಯಮಂತ್ರಿ..

ಪಾಟ್ನಾ: ಜಾರ್ಖಂಡ್ ರಾಜ್ಯ ಸ್ಥಾಪನೆಗೊಂಡ ಪ್ರಾಂಭದಿಂದಲೂ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಚುಕ್ಕಾಣಿ ಹಿಡಿಯುತ್ತಿರುವ ಬುಡಕಟ್ಟಿನ ವ್ಯಕ್ತಿಯ ಸಂಪ್ರದಾಯವನ್ನು ಮುರಿದು ಆದಿವಾಸಿ ಜನಾಂಗಕ್ಕೆ ಸೇರದ ರಘುಬರ್ ದಾಸ್ ಅವರನ್ನು ನೇಮಕ ಮಾಡಿರುವುದಕ್ಕೆ ಜೆಡಿಯು ಮುಖಂಡ ನಿತೀಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದಿವಾಸಿಯಲ್ಲದ ಒಬ್ಬ ವ್ಯಕ್ತಿಯನ್ನು ಜಾರ್ಖಂಡ್ ಮುಖ್ಯಮಂತ್ರಿಯಾಗಿ ನೇಮಕ ಮಾಡಿ ಈ ಹಿಂದಿನ ಸಂಪ್ರದಾಯವನ್ನು ಮುರಿದಿರುವುದಲ್ಲದೆ, ಬುಡಕಟ್ಟು ಜನರ ಮೇಲೆ ನಮಗೆ ವಿಶ್ವಾಸವಿಲ್ಲ ಎಂಬ ಸಂದೇಶ ಬಿಜೆಪಿ ಕಳುಹಿಸಿದೆ ಎಂದಿದ್ದಾರೆ.

ಆದಿವಾಸಿ ಜನರ ಅಭಿಲಾಷೆಗಳನ್ನು ಪೂರೈಸಲೇ ಜಾರ್ಖಂಡ್ ರಾಜ್ಯವನ್ನು ಸ್ಥಾಪಿಸಿದ್ದು ಹಾಗು ಇದಕ್ಕಾಗಿ ಬುಡಕಟ್ಟು ಜನರ ಭಾವನೆಗಳನ್ನು ಗೌರವಿಸಲು ಇಲ್ಲಿಯವರೆಗೆ ಬುಡಕಟ್ಟು ಮೂಲದ ವ್ಯಕ್ತಿಯನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಿದ್ದುದು" ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಈ ನಡೆ ಬುಡಕಟ್ಟು ಜನರಲ್ಲಿ ಅಸಮಧಾನ ಸೃಷ್ಟಿಸಲಿದ್ದು ಇದು ಬುಡಕಟ್ಟು ಜನರು ಮತ್ತು ಇತರ ಜನರ ಮಧ್ಯೆ ಅಸಮಾಧಾನ ಸೃಷ್ಟಿಸಲು ಕೇಸರಿ ಪಕ್ಷ  ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT