ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ತೆರವುಗೊಳಿಸಿ, ಆಂಧ್ರ ಮತ್ತು ತೆಲಂಗಾಣಕ್ಕೆ ಹೈಕೋರ್ಟ್ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆಗಳನ್ನು ನಿರ್ಮಿಸಿವುದು, ಕಟ್ ಔಟ್ ಗಳನ್ನು ಹಾಕುವುದರ...

ಹೈದರಾಬಾದ್: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆಗಳನ್ನು ನಿರ್ಮಿಸಿವುದು, ಕಟ್ ಔಟ್ ಗಳನ್ನು ಹಾಕುವುದರ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಹೈದರಾಬಾದ್ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠ, ಇವುಗಳನ್ನು ಕೂಡಲೆ ತೆರವುಗೊಳಿಸಲು ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳಿಗೆ ಶುಕ್ರವಾರ ಸೂಚನೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ೫ ರಲ್ಲಿ, ಮುಕ್ತಿನುತಲ್ಪಾಡು ಮತ್ತು ಗುಂಡಿಮಿಲ್ಲಪಾಡು ಹಳ್ಳಿಗಳ ಬಳಿ ಪ್ರತಿಮೆಗಳನ್ನು ನಿರ್ಮಿಸಲು ೧೫ ಅಡಿ ರಸ್ತೆಯನ್ನು ಅತಿಕ್ರಮಿಸಿ, ಗುಂಡಿಗಳನ್ನು ತೋಡುತ್ತಿದ್ದ ಕ್ರಮವನ್ನು ಪ್ರಶ್ನಿಸಿ ಪ್ರಕಾಶಂ ಜಿಲ್ಲೆಯ ಎಸ್ ಮುರಳಿಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಾಧೀಶ ಕಲ್ಯಾಣ ಜ್ಯೋತಿ ಸೇನ್ ಗುಪ್ತ ಹಾಗು ನ್ಯಾಯಾಧೀಶ ಪಿ ವಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ಪೀಠ ಈ ಮಧ್ಯಂತರ ತೀರ್ಪು ನೀಡಿದೆ.

ಇದಕ್ಕೆ ಸಂಬಂಧಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡಲೆ ಇದನ್ನು ಅನುಷ್ಟಾನಗೊಳಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಸಾರ್ವಜನಿಕ ರಸ್ತೆ, ಕಾಲುದಾರಿ ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಮೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರಗಳು ಅನುಮತಿ ನೀಡಬಾರದೆಂದು ಈ ಹಿಂದೆ ಸುಪ್ರೀಮ್ ಕೋರ್ಟ್ ನೀಡಿದ್ದ ತೀರ್ಪನ್ನು ಉದಾಹರಿಸಿರುವ ನ್ಯಾಯಾಲಯ, ವಿಐಪಿಗಳ ಹುಟ್ಟು ಹಬ್ಬಕ್ಕೆ ಶುಭ ಕೋರುವ ಕಟ್ ಔಟ್ ಗಳು, ಫ್ಲೆಕ್ಷ್ ಗಳು, ಪ್ರತಿಮೆಗಳು ಜನರಿಗೆ ಮುಜುಗರ ಉಂಟು ಮಾಡುತ್ತದೆ, ಅಲ್ಲದೆ ಆ ವಿಐಪಿಗಳಿಗೂ ಇದು ತೊಂದರೆ ಉಂಟು ಮಾಡುತ್ತದೆ ಎಂದಿದೆ ನ್ಯಾಯಾಲಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT