ಕೂಡಂಕುಳಂ ಅಣು ಸ್ಥಾವರ 
ಪ್ರಧಾನ ಸುದ್ದಿ

ಕೂಡಂಕುಳಂ ಅಣು ಸ್ಥಾವರ: ವಿದ್ಯುಚ್ಚಕ್ತಿ ಉತ್ಪಾದನೆ ಪುನರಾರಂಭ

ಮಂಗಳವಾರ ಮಧ್ಯರಾತ್ರಿಯ ನಂತರ ಭಾರತದ ಅತಿ ದೊಡ್ಡ ಕೂಡಂಕುಳಂ ಅಣು ಸ್ಥಾವರ ...

ನವದೆಹಲಿ: ಮಂಗಳವಾರ ಮಧ್ಯರಾತ್ರಿಯ ನಂತರ ಭಾರತದ ಅತಿ ದೊಡ್ಡ ಕೂಡಂಕುಳಂ ಅಣು ಸ್ಥಾವರ ವಿದ್ಯುಚ್ಛಕ್ತಿ ಉತ್ಪಾದನೆ ಪುನರಾರಂಭಿಸಿದೆ. ರಷ್ಯಾ ಸಹಯೋಗದೊಂದಿಗೆ ಸ್ಥಾಪಿಸಿದ್ದ ೧೦೦೦ ಮೆಗಾ ವ್ಯಾಟ್ ಸ್ಥಾವರದ ಟರ್ಬೈನ್ ಹಾನಿಯಾಗಿದ್ದರಿಂದ ಕೆಲವು ತಿಂಗಳ ಹಿಂದೆ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ದುರಸ್ತಿಯ ನಂತರ ಪೂರ್ತಿ ೧೦೦೦ ಮೆಗಾ ವ್ಯಾಟ್ ವಿದ್ಯುಚ್ಛಕ್ತಿ ಉತ್ಪಾದನೆಯಾಗುತ್ತಿದೆ ಎಂದು ತಿಳಿದು ಬಂದಿದೆ.

ಇದರಿಂದ ಉತ್ಪಾದನೆಯಾಗುವ ವಿದ್ಯುಚ್ಚಕ್ತಿ, ತಮಿಳುನಾಡು, ಪುದುಚೆರಿ, ಕರ್ನಾಟಕ ಮತ್ತು ಕೇರಳದ ಹಲವು ಜಿಲ್ಲೆಗಳಿಗೆ ಪೂರೈಕೆಯಾಗಲಿದೆ. ೮೦೦೦ ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸ್ಥಾವರದ ಕೆಲಸ ಪ್ರಾರಂಭವಾಗಲು ತಡೆಯಾಗಿತ್ತು. ಅಣುಸ್ಥಾವರಗಳು ಸುರಕ್ಷಿತವಲ್ಲ ಎಂದು ಹಲವಾರು ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.

ಇತ್ತೀಚೆಗೆ ಭಾರತ ಇನ್ನೂ ೧೪ ಸ್ಥಾವರಗಳನ್ನು ಆಮದು ಮಾಡಿಕೊಳ್ಳಲು ರಷ್ಯಾ ಜೊತೆ ಒಪ್ಪಂದ ಮಾಡಿಕೊಂಡಿದೆ. ೧೦೦೦ ಮೆಗಾ ವ್ಯಾಟ್ ಶಕ್ತಿಯ ಮತ್ತೊಂದು ಘಟಕ ೨೦೧೫ ರ ವೇಳೆಗೆ ಕೂಡಂಕುಳಂನಲ್ಲಿ ಕೆಲಸ ಪ್ರಾರಂಭಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT