ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಜಾರ್ಖಂಡ್ ಅಭಿವೃದ್ಧಿಗೆ ವಂಶ ಪಾರಂಪರ್ಯ ರಾಜಕೀಯ ಕೊನೆಗಾಣಿಸಿ: ಮೋದಿ

ಮೂರು ದೇಶದ ಪ್ರವಾಸ ಮುಗಿಸಿ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜಾರ್ಖಂಡದ...

ಮೂರು ದೇಶದ ಪ್ರವಾಸ ಮುಗಿಸಿ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜಾರ್ಖಂಡದ ಪಲಮು ಜಿಲ್ಲೆಯ ದಲ್ತೋಂಗಂಜ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ.

ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ "ನಿಮ್ಮ ನೆಲ ಸಂಪನ್ನವಾಗಿದೆ ಆದರ ಜನ ಬಡವರು, ಏಕೆಂದರೆ ಅಣೆಕಟ್ಟುಗಳನ್ನು ಒಡೆದ ಸರ್ಕಾರಗಳನ್ನು ನೀವು ಹೊಂದಿದ್ದಿರಿ. ಜಾರ್ಖಂಡ ಅಭಿವೃದ್ಧಿಯಾಗಬೇಕಾದರೆ ವಂಶ ಪಾರಂಪರ್ಯ ರಾಜಕೀಯವನ್ನು ನೀವು ಕೊನೆಗಾಣಿಸಬೇಕು" ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವನ್ನು ತಂದು ಕೊಟ್ಟದ್ದಕ್ಕೆ ಜನರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ "ರೈತರ ಕಲ್ಯಾಣ ಸರ್ಕಾರದ ಆದ್ಯತೆ. ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಕ್ಕೆ ಹೋಗಿ ಅಲ್ಲಿನ ವಿಜ್ಞಾನಿಗಳನ್ನು ಭೇಟಿ ಮಾಡಿದೆ. ಅಲ್ಲಿ ರೈತರ ಉತ್ಪಾದನೆಯನ್ನು ಹೆಚ್ಚು ಮಾಡುವುದರಿಂದ ಹಿಡಿದು ಸಾಕಷ್ಟು ವಿಷಯಗಳನ್ನು ಚರ್ಚೆ ಮಾಡಿದೆ. ಹಾಗೆಯೇ ಜಪಾನಿನಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿಯನ್ನು ಭೇಟಿ ಮಾಡಿ ನಮ್ಮ ಆದಿವಾಸಿ ಕುಟುಂಬಗಳ ಆರೋಗ್ಯದ ಬಗ್ಗೆ ಚರ್ಚಿಸಿದೆ" ಎಂದಿದ್ದಾರೆ.

"ಇಲ್ಲಿನ ಸರ್ಕಾರ ದೆಹಲಿಯಿಂದ ಸಚಿವರನ್ನು ಇಲ್ಲಿಗೆ ಬರಲು ಬಿಡುವುದಿಲ್ಲ ಎನ್ನುತ್ತಿದೆ. ಜಾರ್ಖಂಡ ಸರ್ಕಾರಕ್ಕೆ ಮೋದಿಯ ಸಚಿವರು ಇಲ್ಲಿಗೆ ಬರುವುದು ಇಷ್ಟವಿಲ್ಲ ಏಕೆಂದರೆ ಅವರ ಬ್ರಷ್ಟಾಚಾರವನ್ನು ನಾವು ಬಯಲಿಗೆಳೆಯುತ್ತೇವೆ ಎಂಬುದು ಅವರಿಗೆ ಗೊತ್ತು." ಎಂದು ಮುಂದುವರೆಸಿ ಹೇಳಿದ್ದಾರೆ.

ಪಲಮು ಜಿಲ್ಲೆ ಜಾರ್ಖಂಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕ್ಸಲ್ ಹಾವಳಿ ಇರುವ ಪ್ರದೇಶ. ೮೧ ಸ್ಥಾನದ ವಿಧಾನಸಭಾ ಚುನಾವಣೆ ಐದು ಹಂತಗಳಲ್ಲಿ ಮಂಗಳವಾರ ಪ್ರಾರಂಭವಾಗಲಿದೆ ಮತ್ತು ಡಿಸೆಂಬರ್ ೨೩ ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT