ನರೇಂದ್ರ ಮೋದಿ 
ಪ್ರಧಾನ ಸುದ್ದಿ

ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ: ಮೋದಿ

ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ..

ನವದೆಹಲಿ: ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಹೇಳುವ ಮೂಲಕ, ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚಿಸಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, 'ಸರ್ಕಾರ ನಡೆಸುವ ಜವಾಬ್ದಾರಿಯನ್ನು ಜನ ನಮಗೆ ನೀಡಿದ್ದಾರೆ. ಆದರೆ ದೇಶ ಮುನ್ನಡೆಸುವ ಜವಾಬ್ದಾರಿ ಎಲ್ಲ ಸಂಸದರ ಮೇಲಿದೆ' ಎಂದು ಹೇಳಿದ್ದಾರೆ.

'ಈ ತಂಪಾದ ವಾತಾವರಣದಲ್ಲಿ, ಕೂಲ್ ಆಗಿಯೇ ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಅಧಿವೇಶನ ಸುಗಮವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ' ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ ಪ್ರತಿಪಕ್ಷಗಳು ಸಹ ಉತ್ತಮ ಚರ್ಚೆಗೆ ಅವಕಾಶ ನೀಡಲಿವೆ ಎಂಬ ವಿಶ್ವಾಸವಿದೆ ಎಂದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಎರಡನೇ ಅಧಿವೇಶನ ಇದಾಗಿದ್ದು, ಚಳಿಗಾಲದ ಅಧಿವೇಶನವಾದರೂ ಸಂಸತ್‌ನಲ್ಲಿ ಬಿಸಿ ಬಿಸಿ ಚರ್ಚೆಗಳೇ ಹೆಚ್ಚು ನಡೆಯುವ ಸಾಧ್ಯತೆ ಇದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಸರ್ಕಾರ ಕೆಲವೊಂದು ಮಹತ್ವಾಕಾಂಕ್ಷಿ ಆರ್ಥಿಕ ಅಜೆಂಡಾಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಅಮೆರಿಕದ ಅತಿಯಾದ ಬೇಡಿಕೆ-ದ್ವಂದ್ವ ನೀತಿ ವಿರುದ್ಧ ಇರಾನ್ ಗರಂ: 2ನೇ ಹಂತದ ಶಾಂತಿ ಮಾತುಕತೆಗೆ ನಕಾರ, ಸಂಘರ್ಷ ಉಲ್ಬಣ ಸಾಧ್ಯತೆ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ, ಸಂಘರ್ಷ ಉಲ್ಬಣ

OpenAI CTO ಹುದ್ದೆಗೆ ಭಾರತೀಯ ಮೂಲದ ಶ್ರೀನಿವಾಸ್ ನಾರಾಯಣನ್ ದಿಢೀರ್ ರಾಜೀನಾಮೆ!

SCROLL FOR NEXT