ನರೇಂದ್ರ ಮೋದಿ 
ಪ್ರಧಾನ ಸುದ್ದಿ

ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ: ಮೋದಿ

ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ..

ನವದೆಹಲಿ: ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಹೇಳುವ ಮೂಲಕ, ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚಿಸಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, 'ಸರ್ಕಾರ ನಡೆಸುವ ಜವಾಬ್ದಾರಿಯನ್ನು ಜನ ನಮಗೆ ನೀಡಿದ್ದಾರೆ. ಆದರೆ ದೇಶ ಮುನ್ನಡೆಸುವ ಜವಾಬ್ದಾರಿ ಎಲ್ಲ ಸಂಸದರ ಮೇಲಿದೆ' ಎಂದು ಹೇಳಿದ್ದಾರೆ.

'ಈ ತಂಪಾದ ವಾತಾವರಣದಲ್ಲಿ, ಕೂಲ್ ಆಗಿಯೇ ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಅಧಿವೇಶನ ಸುಗಮವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ' ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ ಪ್ರತಿಪಕ್ಷಗಳು ಸಹ ಉತ್ತಮ ಚರ್ಚೆಗೆ ಅವಕಾಶ ನೀಡಲಿವೆ ಎಂಬ ವಿಶ್ವಾಸವಿದೆ ಎಂದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಎರಡನೇ ಅಧಿವೇಶನ ಇದಾಗಿದ್ದು, ಚಳಿಗಾಲದ ಅಧಿವೇಶನವಾದರೂ ಸಂಸತ್‌ನಲ್ಲಿ ಬಿಸಿ ಬಿಸಿ ಚರ್ಚೆಗಳೇ ಹೆಚ್ಚು ನಡೆಯುವ ಸಾಧ್ಯತೆ ಇದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಸರ್ಕಾರ ಕೆಲವೊಂದು ಮಹತ್ವಾಕಾಂಕ್ಷಿ ಆರ್ಥಿಕ ಅಜೆಂಡಾಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT