ವಾಲೀಕಾರ್ 
ಪ್ರಧಾನ ಸುದ್ದಿ

ಕವಿವಿ ವಿಶ್ರಾಂತ ಕುಲಪತಿ ವಾಲೀಕಾರ್ ವಿರುದ್ಧದ ಎಫ್‌ಐಆರ್ ರದ್ದು

ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಚ್.ಬಿ.ವಾಲೀಕಾರ್ ಅವರ ವಿರುದ್ಧದ ಎಫ್‌ಐಆರ್...

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಚ್.ಬಿ.ವಾಲೀಕಾರ್ ಅವರ ವಿರುದ್ಧದ ಎಫ್‌ಐಆರ್ ಅನ್ನು ಧಾರವಾಡ ಹೈಕೋರ್ಟ್ ಗುರುವಾರ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಕೋರಿ ವಾಲೀಕಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಬಿಳ್ಳಪ್ಪ ಅವರು, ಕುಲಪತಿಗಳು ವಿಶ್ವವಿದ್ಯಾಲಯದ ನೌಕರರಲ್ಲ, ಹೀಗಾಗಿ ಅವರ ವಿರುದ್ಧ ವಿವಿ ಕಾಯ್ದೆ 2000, ಸೆಕ್ಷನ್ 8/1 ರಡಿ ಕೇಸ್ ದಾಖಲಿಸಲು ಬರುವುದಿಲ್ಲ ಮತ್ತು ಈ ಪ್ರಕರಣ ರಾಜ್ಯಪಾಲರ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿವಿಯ ನೇಮಕಾತಿಯಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯಪಾಲ ವಜುಭಾಯಿ ವಾಲಾ ಅವರು ಇತ್ತೀಚಿಗೆ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದರು.

ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ನೇಮಕಾತಿ ಅವ್ಯವಹಾರ ಸಂಬಂಧ ವಾಲೀಕರ್ ಸೇರಿದಂತೆ ವಿವಿಯ ನಾಲ್ಕು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ನಂಬಿಕೆ ದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ ಕುಲಪತಿ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಸಹ ನಡೆಸಿದ್ದರು. ಆದರೆ ಕೋರ್ಟ್ ಇದೀಗ ಕುಲಪತಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ್ದು ಲೋಕಾಯುಕ್ತಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!