ಸಿದ್ದಲಿಂಗಯ್ಯ 
ಪ್ರಧಾನ ಸುದ್ದಿ

ಸಿದ್ದಲಿಂಗಯ್ಯ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ?

ದಲಿತ ಕವಿ ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆಯುವ 81ನೇ ಅಖಿಲ ಭಾರತ...

ಬೆಳಗಾವಿ: ದಲಿತ ಕವಿ ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆಯುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಮುಂದಿನ ವರ್ಷ ಫೆಬ್ರುವರಿ 1ರಿಂದ 3ರವರೆಗೆ ನಡೆಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಬಾರಿಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ದಲಿತ ಲೇಖಕರನ್ನು ಪರಿಗಣಿಸಲಾಗುತ್ತಿದೆ ಎಂದು ಕಳೆದ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲಿಕ್ ಹಾಲಂಬಿ ಅವರು ಹೇಳಿದ್ದರು. ಸಿದ್ದಲಿಂಗಯ್ಯ ಅವರು ಸಹ ಒಬ್ಬ ಕನ್ನಡದ ಖ್ಯಾತ ದಲಿತ ಕವಿಯಾಗಿದ್ದು, ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

ಸಿದ್ದಲಿಂಗಯ್ಯ ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ನಾಡು ನುಡಿ ಸಂಸ್ಕೃತಿ ಬಗ್ಗೆ ಚಿಂತನೆ ನಡೆಸುವ ಅತಿ ದೊಡ್ಡ ಸಮಾವೇಶ ಕನ್ನಡ ಸಾಹಿತ್ಯ ಸಮ್ಮೇಳನ. ಚರ್ಚಾಗೋಷ್ಠಿ, ಕವಿತಾ ವಾಚನ, ಸಾಹಿತ್ಯ ಮಂಥನ, ಪುಸ್ತಕ ಪ್ರದರ್ಶನ ಹಾಗೂ ಪ್ರಾದೇಶಿಕ ಭೋಜನದ ಉಚಿತ ವ್ಯವಸ್ಥೆ ಮುಂತಾದವುಗಳನ್ನು ಒಳಗೊಂಡ ಸಮ್ಮೇಳನ ಪ್ರತಿ ವರ್ಷ ಲಕ್ಷಾಂತರ ಜನರನ್ನು ಆಕರ್ಷಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT