ಪ್ರಧಾನ ಸುದ್ದಿ

ವಂಶಾಡಳಿತಕ್ಕೆ ತೆರೆಯೆಳೆಯಿರಿ: ಮೋದಿ

Rashmi Kasaragodu

ರಾಂಚಿ: ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ ಎಳೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರವರು.

ವಂಶಾಡಳಿತದಿಂದ ರೋಸಿ ಹೋಗಿರುವ ಜನರು ಲೋಕಸಭಾ ಚುನಾವಣೆಯಲ್ಲಿ ಅದಕ್ಕೆ ತೆರೆ ಎಳೆದಿದ್ದಾರೆ . ಇದೀಗ ಜಾರ್ಖಂಡ್‌ನಲ್ಲಿ ವಂಶಪಾರಂಪರ್ಯ ರಾಜಕೀಯಕ್ಕೆ ತೆರೆ ಎಳೆಯಬೇಕಾಗಿದೆ ಎಂದು ಹೇಳೀದ ಮೋದಿ ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ವಿನಂತಿಸಿದ್ದಾರೆ.

ಜಾರ್ಖಂಡ್‌ನಲ್ಲಿ ನೈಸರ್ಗಿಕ ಸಂಪತ್ತು ಇದೆ, ಆದರೆ ಇದನ್ನು ರಾಜ್ಯ ಸರ್ಕಾರ ಕೊಳ್ಳೆ ಹೊಡೆಯುತ್ತಿದೆ. ಆದ್ದರಿಂದ ಬಿಜೆಪಿಯನ್ನು ಆಯ್ಕೆ ಮಾಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡುವ ಸಮಯ ಬಂದಿದೆ ಎಂದು  ಮೋದಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹೊಸ  ಯೋಜನೆಗಳಿಂದ ಜಾರ್ಖಂಡ್‌ಗೆ ರು. 20 ಲಕ್ಷ ಕೋಟಿಯಷ್ಟು ಹಣ ಕಲ್ಲಿದ್ದಲಿನಿಂದ ಲಭಿಸಲಿದೆ. ಇದನ್ನು ರಾಜ್ಯದ ಅಭಿವೃದ್ಧಿಗೆ ಬಳಸಬಹುದು ಎಂದು ಹೇಳಿದ ಮೋದಿ ಜಾರ್ಖಂಡ್ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದಿದ್ದಾರೆ.

SCROLL FOR NEXT