ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

೫೦ ಲಕ್ಷ ಚಂದಾ ಎತ್ತಿದ ಆಪ್, ವ್ಯಾಟ್ ಸುಧಾರಣೆಯ ಭರವಸೆ ನೀಡಿದ ಕೇಜ್ರಿವಾಲ್

ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮುಂಚೆ ...

ನವದೆಹಲಿ: ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮುಂಚೆ ಪಕ್ಷದ ವ್ಯಾಪಾರಿಗಳ ವಿಭಾಗ ಆಯೋಜಿಸಿದ್ದ ಪಕ್ಷದ ನಿಧಿ ಸಂಗ್ರಹ ಔತಣಕೂಟದಲ್ಲಿ ಭಾನುವಾರ ಎಎಪಿ ಪಕ್ಷ ೫೦ಲಕ್ಷ ರೂ ಸಂಗ್ರಹಿಸಿದೆ.

ಬೇರೆ ರಾಜ್ಯಗಳಿಗಿಂತ ಮೌಲ್ಯಾಧಾರಿತ ತೆರಿಗೆ ಹೆಚ್ಚಿರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಿ ವ್ಯಾಟ್ ಮೇಲೆ ಸುಧಾರಣೆ ತರುವುದಾಗಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಔತಣ ಕೂಟದ ನಂತರ ತಿಳಿಸಿದ್ದಾರೆ.

ರಾಜಧಾನಿಯ ವಿವಿಧ ಭಾಗಗಳಿಂದ ಸುಮಾರು ೧೨೫ ವ್ಯಾಪಾರಿಗಳು ಔತಣಕೂಟದಲ್ಲಿ ಭಾಗವಹಿಸಿದ್ದರು. ಪ್ರತಿ ಊಟಕ್ಕೂ ೨೦ ಸಾವಿರ ರೂ ನಿಗದಿ ಪಡಿಸಲಾಗಿತ್ತು. ಈ ಹಿಂದೆ ಮುಂಬೈನಲ್ಲಿ ಇದೇ ರೀತಿಯ ಔತಣಕೂಟವನ್ನು ಏರ್ಪಡಿಸಿದ್ದ ಆಪ್ ಪಕ್ಷ ೯೧ ಲಕ್ಷ ಸಂಗ್ರಹಿಸಿತ್ತು.

ಪಕ್ಷದ ದೆಹಲಿಯ ಮುನ್ನೋಟವನ್ನು ವಿವರಿಸಿದ ಅರವಿಂದ ಕೇಜ್ರಿವಾಲ್, "ಆಪ್ ಪಕ್ಷ ದೆಹಲಿಯನ್ನು ವ್ಯಾಪಾರಿ ಶಕ್ತಿ ಕೇಂದ್ರವನ್ನಾಗಿ ಪರಿವರ್ತಿಸಿ ವ್ಯಾಪಾರಿ ಸ್ನೇಹಿ ಪರಿಸರವನ್ನು ನಿರ್ಮಿಸುತ್ತೇವೆ" ಎಂಬ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT