ನೇತಾಜಿ ಸುಭಾಷ್ ಚಂದ್ರ ಬೋಸ್ 
ಪ್ರಧಾನ ಸುದ್ದಿ

ನೇತಾಜಿ ಸಂಬಂಧಿತ ಇನ್ನೂ ಹಲವು ದಾಖಲೆಗಳು ರಹಸ್ಯ

ಯುಪಿಎ ಸರ್ಕಾರದ ಹಾದಿಯಲ್ಲೇ ಹೆಜ್ಜೆ ಇಟ್ಟಿರುವ ಎನ್ ಡಿ ಎ ಸರ್ಕಾರ, ನೇತಾಜಿ ...

ನವದೆಹಲಿ: ಯುಪಿಎ ಸರ್ಕಾರದ ಹಾದಿಯಲ್ಲೇ ಹೆಜ್ಜೆ ಇಟ್ಟಿರುವ ಎನ್ ಡಿ ಎ ಸರ್ಕಾರ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಸಾರ್ವಜನಿಕಗೊಳಿಸುವುದಕ್ಕೆ  ನಿರಾಕರಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ, "ಈ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ವಿದೇಶಗಳ ಜೊತೆ ಭಾರತದ ಸಂಬಂಧಕ್ಕೆ ಧಕ್ಕೆ ಬರುತ್ತದೆ" ಎಂಬ ಕಾರಣ ಕೊಟ್ಟು ದಾಖಲೆಗಳ ಬಿಡುಗಡೆಗೆ ಪ್ರಧಾನ ಮಂತ್ರಿ ಕಾರ್ಯಾಲಯ ನಿರಾಕರಿಸಿದೆ.

ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿರುವ ನಾಲ್ಕು ಪ್ರಮುಖ ರಹಸ್ಯ ಕಡತಗಳು, ನೇತಾಜಿ ಮತ್ತು ಅವರ ಮಗಳ ಜೊತೆ ನಡೆದಿದ್ದ ಮಾತುಕತೆ, ನೇತಾಜಿ ಅವರ ಬೂಧಿಯನ್ನು ಭಾರತಕ್ಕೆ ತಂದದ್ದು ಹಾಗೂ ನ್ಯಾಯಮೂರ್ತಿ ಮುಖರ್ಜೀ ಸಮಿತಿ ನೇತಾಜಿ ಅವರ ಸಾವಿನ ಬಗ್ಗೆ ನಡೆಸಿದ ತನಿಖೆಯ ಎರಡು ಕಡತಗಳು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರ ಸುಭಾಷ್ ಅಗರವಾಲ್ ಅವರು "ರಹಸ್ಯ ಕಾಪಾಡುವುದಕ್ಕಿಂತ ಜನರಿಗೆ ನಿಜಾಂಶ ಗೊತ್ತು ಮಾಡುವುದು ಮುಖ್ಯ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT