ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಚಾರ: ಎಎಪಿ ಮುಖಂಡ ಗಾಂಧಿ ದೂರು

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ಪರ ವಹಿಸಿದ್ದ

ನವದೆಹಲಿ: ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ಪರ ವಹಿಸಿದ್ದ ಪಟಿಯಾಲದ ಎಎಪಿ ಲೋಕಸಭಾ ಸದಸ್ಯ ಧರ್ಮವೀರ ಗಾಂಧಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ದೂರಿ ಎಎಪಿ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ಪಕ್ಷದ ನಾಯಕರೂ ಆಗಿರುವ ಗಾಂಧಿ, ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಉಚ್ಚಾಟನೆಗೊಂಡ ನಂತರ ಯಾದವ್ ಹಾಗೂ ಭೂಷಣ್ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೂಡ ಕಾಣಿಸಿಕೊಂಡಿದ್ದರು ಹಾಗು ಪ್ರಜಾಪ್ರಭುತ್ವದ ಮೂಲ ಧ್ಯೇಯಗಳನ್ನು ಮೀರಿದ್ದಕ್ಕೆ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದರು.

ಗಾಂಧಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಪತ್ರದ ವಿಷಯದ ಬಗ್ಗೆ ವಿವರಿಸಲು ನಿರಾಕರಿಸಿದ್ದಾರೆ. ಆದರೆ ಪಕ್ಷದ ಮೂಲಗಳ ಪ್ರಕಾರ ಎರಡು ಮೂರು ದಿನಗಳ ಹಿಂದೆಯೇ ಪತ್ರವನ್ನು ಅರವಿಂದ್ ಅವರಿಗೆ ಕಳುಹಿಸಿದ್ದಾರೆ ಹಾಗು ಪತ್ರದಲ್ಲಿ ತಮ್ಮ ವಿರುದ್ಧ ಕೆಸರೆರಚುವ ಪ್ರಯತ್ನ ಹಾಗೂ ತಮ್ಮ ಪ್ರತಿಕೃತಿಗಳನ್ನು ದಹಿಸುತ್ತಿರುವ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಪಕ್ಷದಲ್ಲಿನ ಆಂತರಿಕ ಜಗಳದ ಬಗ್ಗೆ ಎಚ್ಚರಿಸಿದ್ದ ಗಾಂಧಿ, ಇದು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿದ್ದರು.

"ನಾವು ಎಷ್ಟೇ ದೊಡ್ಡ ನಾಯಕರಾಗಿದ್ದರು, ಅಥವಾ ಕೆಳಮಟ್ಟದ ಕಾರ್ಯಕರ್ತರಾಗಿದ್ದರು ದೇಶದ ಲಕ್ಷಾಂತರ ಬಡಜನ, ನೊಂದ ಭಾರತೀಯರು ಎಎಪಿ ಪಕ್ಷದ ಮೇಲಿಟ್ಟ ನಂಬಿಕೆಯನ್ನು ಹಾಳುಗೆಡವಿವಂತಹ ಕೆಲಸವನ್ನು ಸಿನಿಮೀಯವಾಗಿ ಅದೂ ಸಣ್ಣ ಸಣ್ಣ ಬಗೆಹರಿಸಿಕೊಳ್ಳಬಹುದಾದ ಜಗಳಗಳಿಂದ ಮಾಡಬಾರದು" ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT