ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಎಲ್.ಕೆ.ಆಡ್ವಾಣಿ ಚಾಲನೆ 
ಪ್ರಧಾನ ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಆರಂಭ, ಭೂ ಸ್ವಾಧೀನ ಮಸೂದೆ ಪ್ರಮುಖ ಅಜೆಂಡ

ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಅಶೋಕ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಆಡ್ವಾಣಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕಾರಣಿಯನ್ನು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಸುಮಾರು 330ಕ್ಕೂ ಹೆಚ್ಚು ನಾಯಕರು ಇಂದಿನ ಕಾರ್ಯಕಾರಣಿಯಲ್ಲಿ ಭಾಗವಹಿಸಿದ್ದಾರೆ.

ಭೂ ಸ್ವಾಧೀನ ಮಸೂದೆ, ಪಕ್ಷವನ್ನು ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಬಲವರ್ಧನೆ ಮಾಡುವುದು ಮತ್ತು ಸ್ವಚ್ಛ ಭಾರತ ಮತ್ತು ಸ್ವಚ್ಛ ಗಂಗಾ ಅಭಿಯಾನದಲ್ಲಿ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಚರ್ಚೆಯಾಗಲಿವೆ.

ಕಾರ್ಯಕಾರಣಿ ಸಭೆ ಬಳಿಕ ಇಂದು ಸಂಜೆ ಬಸವನ ಗುಡಿಯ ನ್ಯಾಷಿನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT