ಬೆಂಗಳೂರಿನಲ್ಲ ಅರುಣ್ ಜೇಟ್ಲಿ 
ಪ್ರಧಾನ ಸುದ್ದಿ

2015ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ರೈತರ ಪರವಾಗಿದೆ: ಜೇಟ್ಲಿ

2013ರ ಭೂಸ್ವಾಧೀನ ಕಾಯ್ದೆ ರೈತ ವಿರೋಧಿ ಕಾಯ್ದೆಯಾಗಿತ್ತು. ಅದರಲ್ಲಿ ಗ್ರಾಮೀಣ ಬದುಕು ನೀರಾವರಿ, ರಸ್ತೆಗಳು, ವಿದ್ಯುಚ್ಛಕ್ತಿ ಯಾವುದಕ್ಕೂ...

ಬೆಂಗಳೂರು: 2013ರ ಭೂಸ್ವಾಧೀನ ಕಾಯ್ದೆ ರೈತ ವಿರೋಧಿ ಕಾಯ್ದೆಯಾಗಿತ್ತು. ಅದರಲ್ಲಿ ಗ್ರಾಮೀಣ ಬದುಕು ನೀರಾವರಿ, ರಸ್ತೆಗಳು, ವಿದ್ಯುಚ್ಛಕ್ತಿ ಯಾವುದಕ್ಕೂ ಆದ್ಯತೆ ನೀಡಿರಲಿಲ್ಲ. ಆದರೆ 2015ರ ಭೂಸ್ವಾಧೀನ ಕಾಯ್ದೆ ರೈತರ ಪರವಾಗಿದೆ. ಅಲ್ಲದೆ ಇದರಲ್ಲಿ ರೈತರಿಗಾಗಿ ವಿಶೇಷ ಸೌಲತ್ತುಗಳನ್ನು ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಮತ್ತು ವಾರ್ತಾ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.

ಉದ್ಯಾನನಗರಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಕ್ತಾಯದ ಬಳಿಕ ಖಾಸಗಿ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ತಂದಿದ್ದ ಭೂಸ್ವಾಧೀನ ಕಾಯ್ದೆ ರೈತರ ವಿರೋಧಿಯಾಗಿತ್ತು. ಇದರಲ್ಲಿ ರೈತರ ಅಭ್ಯೋದಯಕ್ಕೆ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಆದರೆ ಪ್ರಸ್ತುತ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹೊರ ತಂದಿರುವ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ರೈತರ ಪರವಾಗಿದೆ ಎಂದರು.

ಪ್ರಪ್ರಥಮವಾಗಿ ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಆಗಬೇಕಿದೆ ಈ ಮೂಲಕ ಗ್ರಾಮೀಣ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಆಸೆ ನಮ್ಮದು. ಆದ್ದರಿಂದ ಗ್ರಾಮೀಣ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು, ಸರ್ಕಾರದ ಸಾಧನೆ ಬಗ್ಗೆ ದೇಶದಲ್ಲಿ ಒಳ್ಳೆಯ ಅಭಿಪ್ರಾಯವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT