ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಉದ್ದೇಶಿಸಿತ ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ....

ಬೆಂಗಳೂರು: ಉದ್ದೇಶಿಸಿತ ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಗರದ ಅಶೋಕ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದ ಮೋದಿ, ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಅನಗತ್ಯ ಹೋರಾಟ ನಡೆಸುತ್ತಿದೆ. ಆದರೂ ಪ್ರತಿಪಕ್ಷಗಳ ಹೋರಾಟಕ್ಕೆ ನಾವು ಎದೆಗುಂದುವುದು ಬೇಡ. ಕಾಂಗ್ರೆಸ್ ಹೋರಾಟವನ್ನು ರಾಜಕೀಯವಾಗಿ ಎದುರಿಸೋಣ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪಕ್ಷ ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ವೇಳೆ ಕಾರ್ಯಕಾರಣಿಯುದ್ದಕ್ಕೂ ಮೌನವಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರನ್ನು ಹೊಗಳಿದ ಮೋದಿ, ಪಕ್ಷಕ್ಕೆ ಆಡ್ವಾಣಿ ಅವರ ಮಾರ್ಗದರ್ಶನ ಹಾಗೂ ಕೊಡುಗೆ ಕುರಿತು ಬಣ್ಣನೆ ಮಾಡಿದರು. ಈ ಮೂಲಕ ಆಡ್ವಾಣಿಯವರನ್ನು ಕಡೆಗಣಿಸಲಾಗಿದೆ ಎಂಬ ಮಾಧ್ಯಮಗಳ ವರದಿಗೆ ತೆರೆ ಎಳೆಯಲು ಪ್ರಧಾನಿ ಯತ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ