ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಉದ್ದೇಶಿಸಿತ ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ....

ಬೆಂಗಳೂರು: ಉದ್ದೇಶಿಸಿತ ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಗರದ ಅಶೋಕ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದ ಮೋದಿ, ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಅನಗತ್ಯ ಹೋರಾಟ ನಡೆಸುತ್ತಿದೆ. ಆದರೂ ಪ್ರತಿಪಕ್ಷಗಳ ಹೋರಾಟಕ್ಕೆ ನಾವು ಎದೆಗುಂದುವುದು ಬೇಡ. ಕಾಂಗ್ರೆಸ್ ಹೋರಾಟವನ್ನು ರಾಜಕೀಯವಾಗಿ ಎದುರಿಸೋಣ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪಕ್ಷ ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ವೇಳೆ ಕಾರ್ಯಕಾರಣಿಯುದ್ದಕ್ಕೂ ಮೌನವಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರನ್ನು ಹೊಗಳಿದ ಮೋದಿ, ಪಕ್ಷಕ್ಕೆ ಆಡ್ವಾಣಿ ಅವರ ಮಾರ್ಗದರ್ಶನ ಹಾಗೂ ಕೊಡುಗೆ ಕುರಿತು ಬಣ್ಣನೆ ಮಾಡಿದರು. ಈ ಮೂಲಕ ಆಡ್ವಾಣಿಯವರನ್ನು ಕಡೆಗಣಿಸಲಾಗಿದೆ ಎಂಬ ಮಾಧ್ಯಮಗಳ ವರದಿಗೆ ತೆರೆ ಎಳೆಯಲು ಪ್ರಧಾನಿ ಯತ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT