ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತೆಲಂಗಾಣದಲ್ಲಿ ಶಂಕಿತ ಸಿಮಿ ಕಾರ್ಯಕರ್ತರು ಗುಂಡೇಟಿಗೆ ಬಲಿ

ತೆಲಂಗಾಣದ ನಲಗೊಂದ ಜಿಲ್ಲೆಯಲ್ಲಿ ಏಪ್ರಿಲ್ ೨ ರಂದು ಇಬ್ಬರು ಪೊಲೀಸರನ್ನು ಗುಂಡಿನ ದಾಳಿ ನಡೆಸಿ ಕೊಂದು, ಮೂವರನ್ನು ಗಾಯಗೊಳಿಸಿದ್ದ ಇಬ್ಬರನ್ನು

ಹೈದರಾಬಾದ್: ತೆಲಂಗಾಣದ ನಲಗೊಂದ ಜಿಲ್ಲೆಯಲ್ಲಿ ಏಪ್ರಿಲ್ ೨ ರಂದು ಇಬ್ಬರು ಪೊಲೀಸರನ್ನು ಗುಂಡಿನ ದಾಳಿ ನಡೆಸಿ ಕೊಂದು, ಮೂವರನ್ನು ಗಾಯಗೊಳಿಸಿದ್ದ ಇಬ್ಬರನ್ನು ಪೊಲೀಸ್ ಎನ್ಕೌಂಟರ್ ನಲ್ಲಿ ಕೊಲ್ಲಲಾಗಿದೆ. ಈ ಗುಂಡಿನ ಕಾಳಗದಲ್ಲಿ ಒಬ್ಬ ಪೊಲೀಸ್ ಕಾನ್ಸ್ಟೆಬಲ್ ಕೂಡ ಮೃತಪಟ್ಟಿದ್ದಾನೆ.

ಏಪ್ರಿಲ್ ೨ ರ ಸೂರ್ಯಪೇಟ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಮೊತ್ಕೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಜಾನಕಿಪುರಂ ಬಳಿ ಎನ್ಕೌಂಟರ್ ನಲ್ಲಿ ಕೊಲ್ಲಲಾಗಿದೆ ಈ ಗುಂಡಿನ ಕಾಳಗದಲ್ಲಿ ಒಬ್ಬ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಒಬ್ಬ ಇನ್ಸ್ಪೆಕ್ಟರ್ ಮತ್ತು ಒಬ್ಬ ಎಸ್ ಐ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಲಭ್ಯವಾದ ಆಧಾರದ ಮೇಲೆ ಇವರಿಬ್ಬರನ್ನು ಪೊಲೀಸ್ ತಂಡಗಳು ಅಟ್ಟಿಸಿಕೊಂಡು  ಹೋದಾಗ, ಬೈಕಿನ ಮೇಲೆ ಹೋಗುತ್ತಿದ್ದ ಅವರು ಪೋಲಿಸರ ಮೇಲೆ ಗುಂಡು ಹಾರಿಸಿದ್ದರಿಂದ ನಾಗರಾಜ್ ಎಂಬ ಪೇದೆ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ ತಂಡ ಅವರಿಬ್ಬರನ್ನೂ ಕೊಂದು ಹಾಕಿದೆ" ಎಂದು ತೆಲಂಗಾಣ ಡಿಜಿಪಿ ಅನುರಾಗ್ ಶರ್ಮಾ ತಿಳಿಸಿದ್ದಾರೆ.

ಅವರು ಸಿಮಿ ಕಾರ್ಯಕರ್ತರೇ ಎಂಬ ಪ್ರಶ್ನೆಗೆ, ಇನ್ನು ಧೃಢೀಕರಣ ಸಿಕ್ಕಿಲ್ಲ.. ಅವರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತೆಲಂಗಾಣ ಪೋಲಿಸ್ ಅಧ್ಯಕ್ಷ ತಿಳಿಸಿದ್ದಾರೆ. ಇವರಿಬ್ಬರು ಉತ್ತರಪ್ರದೇಶದ ಗ್ಯಾಂಗಿಗೆ ಸೇರಿದ್ದವರು ಹಾಗು ಸೂರ್ಯಪೇಟ್ ಕೊಲೆಗಳಲ್ಲಿ ತಲೆಮರೆಸಿಕೊಂಡಿದ್ದವರು ಎಂಬ ಮಾಹಿತಿ ನಮಗೆ ತಿಳಿದುಬಂದಿತ್ತು ಎಂದಷ್ಟೇ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP

ಜು. 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ವಾರ್ನಿಂಗ್ ಕೊಟ್ಟ ರಾಜ್ ಠಾಕ್ರೆ!

India vs Australia: ಆಸ್ಟ್ರೇಲಿಯಾ ತಂಡದಲ್ಲಿ ಭಾರತ ಮೂಲದ ಇಬ್ಬರಿಗೆ ಸ್ಥಾನ; ಟೀಂ ಇಂಡಿಯಾ ವಿರುದ್ಧವೇ ಕಣಕ್ಕೆ!