ಡಿ.ಕೆ.ರವಿ 
ಪ್ರಧಾನ ಸುದ್ದಿ

ಡಿ.ಕೆ.ರವಿ ಪ್ರಕರಣ: ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ಆಕ್ಷೇಪ, ಹೊಸ ಅಧಿಸೂಚನೆ ಹೊರಡಿಸಿದ ಸರ್ಕಾರ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ....

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸೋಮವಾರ ಕರ್ನಾಟಕ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.

ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಯಾವುದೇ ಷರತ್ತು ವಿಧಿಸದೆ ಹೊಸ ಅಧಿಸೂಚನೆ ಜಾರಿ ಮಾಡಿದೆ.

ಸಾಕಷ್ಟು ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ರಾಜ್ಯ ಸರ್ಕಾರ, ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತಿನೊಂದಿಗೆ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು.

ರಾಜ್ಯ ಸರ್ಕಾರದ ಷರತ್ತುಬದ್ಧ ಅಧಿಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ನಡೆಸುವುದಾಗಿ ಸ್ಪಷ್ಟಪಡಿಸಿತ್ತು.

ಸಿಬಿಐಗೆ ಮತ್ತೆ ಮನವಿ ಮಾಡಲಾಗುವುದು: ಸಿಎಂ
ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿರುವ ಬಗ್ಗೆ ದೆಹಲಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣದ ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಮತ್ತೆ ಮನವಿ ಮಾಡಲಾಗುವುದು ಎಂದರು.

'ಷರತ್ತು ವಿಧಿಸಬಾರದು ಎಂದು ಅವರು ಅಧಿಸೂಚೆಯನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ನಾವು ಷರತ್ತು ವಿಧಿಸಿದೆ ಮತ್ತೊಮ್ಮೆ ಅಧಿಸೂಚೆನೆಯನ್ನು ಕಳುಹಿಸುತ್ತೇವೆ' ಎಂದು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!