ಡಿ.ಕೆ.ರವಿ 
ಪ್ರಧಾನ ಸುದ್ದಿ

ಡಿ.ಕೆ.ರವಿ ಪ್ರಕರಣ: ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ಆಕ್ಷೇಪ, ಹೊಸ ಅಧಿಸೂಚನೆ ಹೊರಡಿಸಿದ ಸರ್ಕಾರ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ....

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸೋಮವಾರ ಕರ್ನಾಟಕ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.

ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಯಾವುದೇ ಷರತ್ತು ವಿಧಿಸದೆ ಹೊಸ ಅಧಿಸೂಚನೆ ಜಾರಿ ಮಾಡಿದೆ.

ಸಾಕಷ್ಟು ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ರಾಜ್ಯ ಸರ್ಕಾರ, ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತಿನೊಂದಿಗೆ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು.

ರಾಜ್ಯ ಸರ್ಕಾರದ ಷರತ್ತುಬದ್ಧ ಅಧಿಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ನಡೆಸುವುದಾಗಿ ಸ್ಪಷ್ಟಪಡಿಸಿತ್ತು.

ಸಿಬಿಐಗೆ ಮತ್ತೆ ಮನವಿ ಮಾಡಲಾಗುವುದು: ಸಿಎಂ
ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿರುವ ಬಗ್ಗೆ ದೆಹಲಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣದ ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಮತ್ತೆ ಮನವಿ ಮಾಡಲಾಗುವುದು ಎಂದರು.

'ಷರತ್ತು ವಿಧಿಸಬಾರದು ಎಂದು ಅವರು ಅಧಿಸೂಚೆಯನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ನಾವು ಷರತ್ತು ವಿಧಿಸಿದೆ ಮತ್ತೊಮ್ಮೆ ಅಧಿಸೂಚೆನೆಯನ್ನು ಕಳುಹಿಸುತ್ತೇವೆ' ಎಂದು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT