ಕಾರ್ಯಾಚರಣೆ ನಡೆದ ಸ್ಥಳ 
ಪ್ರಧಾನ ಸುದ್ದಿ

ಆಂಧ್ರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ 20 ಕಾಡುಗಳ್ಳರಿಗೆ ತಮಿಳುನಾಡು ಸರ್ಕಾರದಿಂದ ಪರಿಹಾರ ಘೋಷಣೆ

ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಮೃತಪಟ್ಟ 20 ಕಾಡುಗಳ್ಳರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಬುಧವಾರ ಪರಿಹಾರ ಘೋಷಿಸಿದೆ.

ಚೆನ್ನೈ: ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಮೃತಪಟ್ಟ 20 ಕಾಡುಗಳ್ಳರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಬುಧವಾರ ಪರಿಹಾರ ಘೋಷಿಸಿದೆ.

ವರದಿಗಳ ಪ್ರಕಾರ, ಎಐಎಡಿಎಂಕೆ ಸರ್ಕಾರ ಮೃತರ ಕುಟುಂಬಕ್ಕೆ ತಲಾ ಮೂರು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.

ಚಿತ್ತೂರು ಜಿಲ್ಲೆ, ಚಂದ್ರಗಿರಿ ಮಂಡಲ್ ಶ್ರೀನಿವಾಸ ಮಂಗಾಪುರದ ಸಮೀಪ ನಿನ್ನೆ ಆಂಧ್ರದ ವಿಷೇಷ ಕಾರ್ಯಪಡೆ ಪೊಲೀಸರು ಮತ್ತು ಅರಣ್ಯ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಮಿಳುನಾಡಿನ 20 ರಕ್ತಚಂದನ ಕಳ್ಳರು ಹತರಾಗಿದ್ದರು. ಆದರೆ ಆಂಧ್ರದ ಈ ಕಾರ್ಯಾಚರಣೆಯನ್ನು ತೀವ್ರವಾಗಿ ವಿರೋಧಿಸಿರುವ ತಮಿಳುನಾಡು ಸರ್ಕಾರ, ಮೃತಪಟ್ಟವರು ಕಳ್ಳರಲ್ಲ, ನಮ್ಮ ರಾಜ್ಯದ ಕೂಲಿ ಕಾರ್ಮಿಕರು ಎಂದು ಹೇಳಿದೆ.

ಆಂಧ್ರಪ್ರದೇಶ ಪೊಲೀಸರ ಕ್ರಮವನ್ನು ಬಲವಾಗಿ ಖಂಡಿಸಿರುವ ತಮಿಳುನಾಡು ಸರ್ಕಾರ, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಟೀಕಿಸಿದೆ.

ಈ ಮಧ್ಯೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಹ ಆಂಧ್ರಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT