ಮನಮೋಹನ್ ಸಿಂಗ್ 
ಪ್ರಧಾನ ಸುದ್ದಿ

ಕಲ್ಲಿದ್ದಲು ಪ್ರಕರಣ: ಮನಮೋಹನ್ ಸಿಂಗ್ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಕಲ್ಲಿದ್ದಲು ಬ್ಲಾಕ್ ವಿಂಗಡನೆಯಲ್ಲಿ ಅವ್ಯವಹಾರದ ಪ್ರಕರಣದಲ್ಲಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜುಲೈ ೧೫ ರಂದು

ನವದೆಹಲಿ: ಕಲ್ಲಿದ್ದಲು ಬ್ಲಾಕ್ ವಿಂಗಡನೆಯಲ್ಲಿ ಅವ್ಯವಹಾರದ ಪ್ರಕರಣದಲ್ಲಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜುಲೈ ೧೫ ರಂದು ನ್ಯಾಯಾಲಯಕ್ಕೆ ಹಾಜರಾಗುವಂತ ಸಮನ್ಸ್ ಇದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಬುಧವಾರ ಮುಂದೂಡಿದೆ.

ತಲಬಿರಾ-೨ ಕಲ್ಲಿದ್ದಲು ಬ್ಲಾಕ್ ಅನ್ನು ಕುಮಾರ್ ಮಂಗಳಂ ಬಿರ್ಲಾ ಒಡೆತನದ ಹಿಂಡಾಲ್ಕೊ ಸಂಸ್ಥೆಗೆ ವಹಿಸಿರುವ ಆರೋಪದಲ್ಲಿ ಮನಮೋಹನ್ ಸಿಂಗ್ ಅವರಿಗೆ ಸಿ ಬಿ ಐ ಸಮನ್ಸ್ ನೀಡಿತ್ತು. ಆದರೆ ಇದಕ್ಕೆ ಸುಪ್ರೀಮ್ ಕೋರ್ಟ್ ಏಪ್ರಿಲ್ ೧ ರಂದು ತಡೆಯಾಜ್ಞೆ ನೀಡಿರುವುದನ್ನು ಕೋರ್ಟ್ ನ ಗಮನಕ್ಕೆ ತಂದ ಮೇಲೆ ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.

ಸಿಬಿಐ ನ ಮಾರ್ಚ್ ೧೧ರ ಆದೇಶವನ್ನು ಪ್ರಶ್ನಿಸಿ ಅಪೆಕ್ಸ್ ನ್ಯಾಯಾಲಯ ಸಿಬಿಐಗೂ ನೋಟಿಸ್ ನೀಡಿ ಮುಂದಿನ ಕ್ರಮಗಳಿಗೆ ತಡೆ ನೀಡಿತ್ತು.

ಹಾಗೆಯೆ ಉದ್ಯಮಿ ಬಿರ್ಲಾ, ಮಾಜಿ ಕಲ್ಲಿದ್ದಲು ನಿರ್ದೇಶಕ ಪಿ ಸಿ ಪರಾಕ್, ಡಿ ಭಟ್ಟಾಚಾರ್ಯ ಹಾಗೂ ಹಿಂಡಾಲ್ಕೊ ವಿರುದ್ಧದ ಸಮನ್ಸ್ ಗೆ ಕೂಡ ನ್ಯಾಯಾಲಯ ನಿಷೇಧ ಹೇರಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT