ಮನಮೋಹನ್ ಸಿಂಗ್ 
ಪ್ರಧಾನ ಸುದ್ದಿ

ಕಲ್ಲಿದ್ದಲು ಪ್ರಕರಣ: ಮನಮೋಹನ್ ಸಿಂಗ್ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಕಲ್ಲಿದ್ದಲು ಬ್ಲಾಕ್ ವಿಂಗಡನೆಯಲ್ಲಿ ಅವ್ಯವಹಾರದ ಪ್ರಕರಣದಲ್ಲಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜುಲೈ ೧೫ ರಂದು

ನವದೆಹಲಿ: ಕಲ್ಲಿದ್ದಲು ಬ್ಲಾಕ್ ವಿಂಗಡನೆಯಲ್ಲಿ ಅವ್ಯವಹಾರದ ಪ್ರಕರಣದಲ್ಲಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜುಲೈ ೧೫ ರಂದು ನ್ಯಾಯಾಲಯಕ್ಕೆ ಹಾಜರಾಗುವಂತ ಸಮನ್ಸ್ ಇದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಬುಧವಾರ ಮುಂದೂಡಿದೆ.

ತಲಬಿರಾ-೨ ಕಲ್ಲಿದ್ದಲು ಬ್ಲಾಕ್ ಅನ್ನು ಕುಮಾರ್ ಮಂಗಳಂ ಬಿರ್ಲಾ ಒಡೆತನದ ಹಿಂಡಾಲ್ಕೊ ಸಂಸ್ಥೆಗೆ ವಹಿಸಿರುವ ಆರೋಪದಲ್ಲಿ ಮನಮೋಹನ್ ಸಿಂಗ್ ಅವರಿಗೆ ಸಿ ಬಿ ಐ ಸಮನ್ಸ್ ನೀಡಿತ್ತು. ಆದರೆ ಇದಕ್ಕೆ ಸುಪ್ರೀಮ್ ಕೋರ್ಟ್ ಏಪ್ರಿಲ್ ೧ ರಂದು ತಡೆಯಾಜ್ಞೆ ನೀಡಿರುವುದನ್ನು ಕೋರ್ಟ್ ನ ಗಮನಕ್ಕೆ ತಂದ ಮೇಲೆ ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.

ಸಿಬಿಐ ನ ಮಾರ್ಚ್ ೧೧ರ ಆದೇಶವನ್ನು ಪ್ರಶ್ನಿಸಿ ಅಪೆಕ್ಸ್ ನ್ಯಾಯಾಲಯ ಸಿಬಿಐಗೂ ನೋಟಿಸ್ ನೀಡಿ ಮುಂದಿನ ಕ್ರಮಗಳಿಗೆ ತಡೆ ನೀಡಿತ್ತು.

ಹಾಗೆಯೆ ಉದ್ಯಮಿ ಬಿರ್ಲಾ, ಮಾಜಿ ಕಲ್ಲಿದ್ದಲು ನಿರ್ದೇಶಕ ಪಿ ಸಿ ಪರಾಕ್, ಡಿ ಭಟ್ಟಾಚಾರ್ಯ ಹಾಗೂ ಹಿಂಡಾಲ್ಕೊ ವಿರುದ್ಧದ ಸಮನ್ಸ್ ಗೆ ಕೂಡ ನ್ಯಾಯಾಲಯ ನಿಷೇಧ ಹೇರಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT