ಬಿಜೆಪಿ ಶಾಸಕ ಆನಂದ್ ಸಿಂಗ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಆನಂದ್ ಸಿಂಗ್‌ಗೆ ಏ.17ರವರೆಗೆ ನ್ಯಾಯಾಂಗ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.

ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಆನಂದ್ ಸಿಂಗ್ ಅವರನ್ನು ಬಂಧಿಸಿ, ಮಧ್ಯಾಹ್ನ ಬೆಂಗಳೂರಿನ ಲೋಕಾಯುಕ್ತ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆನಂದ್ ಸಿಂಗ್ ಅವರನ್ನು ಏಪ್ರಿಲ್ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಹಿಂದೆ ಇದೇ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಆನಂದ್ ಸಿಂಗ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಆನಂದ್ ಸಿಂಗ್ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಕಳೆದ 2013 ಅಕ್ಟೋಬರ್ 17ರಂದು ಶಾಸಕ ಆನಂದ್ ಸಿಂಗ್ ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

SCROLL FOR NEXT