ರಾಮಲಿಂಗರಾಜು 
ಪ್ರಧಾನ ಸುದ್ದಿ

ಸತ್ಯಂ ಹಗರಣ: ರಾಮಲಿಂಗರಾಜು ಸೇರಿ 10 ಮಂದಿಗೆ 7 ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ ಹಗರಣಕ್ಕೆ ಸಂಬಂಧಿಸಿದಂತೆ ಸತ್ಯಂ ಕಂಪ್ಯೂಟರ್ ಸಂಸ್ಥಾಪಕ ರಾಮಲಿಂಗರಾಜು ಸೇರಿ ಹತ್ತು ಮಂದಿ ತಪ್ಪಿತಸ್ಥರಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷ...

ಹೈದರಾಬಾದ್: ಬಹುಕೋಟಿ ಸತ್ಯಂ ಕಂಪ್ಯೂಟರ್ ಸರ್ವೀಸಸ್ ಲಿಮಿಟೆಡ್(ಎಸ್ ಸಿಎಸ್ಎಲ್ )ಹಗರಣದ ಪ್ರಮುಖ ಅಪರಾಧಿ ಸತ್ಯಂ ಕಂಪ್ಯೂಟರ್ ಸಂಸ್ಥಾಪಕ ರಾಮಲಿಂಗರಾಜು ಸೇರಿ ಹತ್ತು ಮಂದಿ ತಪ್ಪಿತಸ್ಥರಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಡಿ.23ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು  ತೀರ್ಪು ಪ್ರಕಟಿಸಿದ ನ್ಯಾಯಾಮೂರ್ತಿ ಬಿವಿಎಲ್‌‌‌‌ಎನ್‌‌ ಚಕ್ರವರ್ತಿ ಅವರು,  ಪ್ರಕರಣದ ಹತ್ತು ಆರೋಪಿಗಳು ತಪ್ಪಿತಸ್ಥರು ಎಂದು ಬೆಳಗ್ಗೆ ತೀರ್ಪು ನೀಡಿದ್ದರು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನಕ್ಕೆ ಕಾಯ್ದಿರಿಸಿದ್ದರು.

ಇಂದು ಮಧ್ಯಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾ. ಚಕ್ರವರ್ತಿ ಅವರು, ರಾಮಲಿಂಗರಾಜು ಮತ್ತು ಸಹೋದರ ರಾಮರಾಜುಗೆ 7 ವರ್ಷ ಜೈಲು ಶಿಕ್ಷೆ ಹಾಗೂ ತಲಾ 5.5 ಕೋಟಿ ರುಪಾಯಿ ದಂಡ ವಿಧಿಸಿದೆ. ಇತರ 8 ಅಪರಾಧಿಗಳಿಗೆ 7 ವರ್ಷ ಜೈಲು ಹಾಗೂ ತಲಾ 25 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ.

ರಾಷ್ಟ್ರದ ಅತಿದೊಡ್ಡ ಲೆಕ್ಕಾಚಾರ ವಂಚನೆ ಎಂದೇ ಪರಿಗಣಿಸಲಾಗಿರುವ ಈ ಹಗರಣ 2009ರ ಜನವರಿ 7ರಂದು ಬೆಳಕಿಗೆ ಬಂದಿತ್ತು. ಕಂಪೆನಿಯ ಸಂಸ್ಥಾಪಕ ಹಾಗೂ ಆಗಿನ ಅಧ್ಯಕ್ಷ ಬಿ. ರಾಮಲಿಂಗ ರಾಜು ಅವರು ಹಲವು ವರ್ಷಗಳಿಂದ ಕೋಟಿಗಟ್ಟಲೆ ರೂಪಾಯಿಗಳ ಲಾಭವನ್ನು ತೋರಿಸಿ ತಮ್ಮ ಕಂಪೆನಿಯ ಲೆಕ್ಕಪತ್ರಗಳನ್ನು ಕುಶಲತೆಯಿಂದ ನಿಭಾಯಿಸಲಾಗಿದೆ ಎಂದು ಒಪ್ಪಿಕೊಳ್ಳುವುದರೊಂದಿಗೆ ಈ ಹಗರಣ ಬಯಲಾಗಿತ್ತು.

ಸಿಬಿಐ ನ್ಯಾಯಾಲಯವು ಕಳೆದ ಆರು ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸುಮಾರು 3000 ಪುಟಕ್ಕೀ ಅಧಿಕ ದಾಖಲೆ ಪತ್ರಗಳು ಹಾಗೂ 226 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮುಖ್ಯಸ್ಥ ಬಿ. ರಾಮಲಿಂಗಾ ರಾಜು ಅವರನ್ನು ಬಂಧಿಸಲಾಗಿತ್ತು.

ಈ ಹಗರಣವನ್ನು ಲೆಕ್ಕ ವಿಭಾಗದಲ್ಲಿ ನಡೆದಿರುವ ದೇಶದ ಅತಿ ದೊಡ್ಡ ಹಗರಣ ಎಂದು ಹೇಳಲಾಗಿದ್ದು, ಇದು 2009ರಲ್ಲಿ ಬೆಳಕಿಗೆ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT