ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಉಚ್ಛಾಟಿತ ನಾಯಕರು ಮತ್ತೆ ತೆಕ್ಕೆಗೆ; ಸಂಜಯ್ ಸಿಂಗ್ ಸ್ಪಷ್ಟನೆ ಕೇಳಿದ ಎಎಪಿ ಪಂಜಾಬ್ ಘಟಕ

ಆಮ್ ಆದ್ಮಿ ಪಕ್ಷದ ಶಿಸ್ತು ಪಾಲನಾ ಸಮಿತಿ, ಉಚ್ಛಾಟಿತ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದ ಕುರಿತು ಸ್ಪಷ್ಟನೆ ನೀಡುವಂತೆ

ಜಲಂಧರ್: ಆಮ್ ಆದ್ಮಿ ಪಕ್ಷದ ಶಿಸ್ತು ಪಾಲನಾ ಸಮಿತಿ, ಉಚ್ಛಾಟಿತ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದ ಕುರಿತು ಸ್ಪಷ್ಟನೆ ನೀಡುವಂತೆ ಹಿರಿಯ ನಾಯಕ ಸಂಜಯ್ ಸಿಂಗ್ ಅವರಿಗೆ ನೋಟಿಸ್ ನೀಡಿದೆ.

"ಸುಮಾರು ೨೩ ಜನ ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಹೊರಹಾಕಲಾಗಿದ್ದ, ಉಚ್ಛಾಟಿಸಲಾಗಿದ್ದ ನಾಯಕರನ್ನು ಮತ್ತೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿದೆ ಎಂಬ ವದಂತಿಗಳು ಗಾಳಿಯಲ್ಲಿ ದಟ್ಟವಾಗಿದೆ" ಎಂದು ಎಎಪಿ ಪಕ್ಷ ಪಂಜಾಬ್ ಘಟಕದ ಶಿಸ್ತು ಪಾಲನಾ ಸಮಿತಿ ಸದಸ್ಯ ಪ್ರಣವ್ ರವಿ, ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿ ಉದಾಸೀನ ತೋರಿದ್ದು, ಉಚ್ಛಾಟಿತರನ್ನು ಪಕ್ಷದ ತೆಕ್ಕೆಗೆ ಮತ್ತೆ ತರಲು ತೆಗೆದುಕೊಂಡಿರುವ ಕ್ರಮ ಮತ್ತು ದಾಖಲೆಗಳ ವಿವರ ಕೇಳಿದ್ದಾರೆ.

ಇಲ್ಲಿಯವರೆಗೂ ಎಎಪಿ ಪಕ್ಷ ಪಂಜಾಬಿನಲ್ಲಿ ಸುಮಾರು ೨೩ ಪಕ್ಷದ ಸದಸ್ಯರನ್ನು ಉಚ್ಛಾಟಿಸಿದ್ದು ಅವರಲ್ಲಿ ಪ್ರೋ ಮಂಜಿತ್ ಸಿಂಗ್, ಬಲದೀಪ್ ಸಿಂಗ್ ಮತ್ತು ಜ್ಯೋತಿ ಮನ್ ಕೂಡ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

SCROLL FOR NEXT