ಚಿತ್ತೂರು ಎನ್ಕೌಂಟರ್ ನ ಒಂದು ದೃಶ್ಯ 
ಪ್ರಧಾನ ಸುದ್ದಿ

ಚಿತ್ತೂರು ಎನ್ಕೌಂಟರ್: ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲಿಸಿದ ಎನ್ ಎಚ್ ಆರ್ ಸಿ

ಚಿತ್ತೂರು ಎನ್ಕೌಂಟರ್ ನಲ್ಲಿ ಆಂಧ್ರ ಪ್ರದೇಶದ ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ೨೦ ಜನ ಮರ ಕಡಿಯುವ ಬುಡಕಟ್ಟಿನವರ ಜೊತೆಗಿದ್ದ

ನವದೆಹಲಿ: ಚಿತ್ತೂರು ಎನ್ಕೌಂಟರ್ ನಲ್ಲಿ ಆಂಧ್ರ ಪ್ರದೇಶದ ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ೨೦ ಜನ ಮರ ಕಡಿಯುವ ಬುಡಕಟ್ಟಿನವರ ಜೊತೆಗಿದ್ದ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ದಾಖಲಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಕೆ ಜಿ ಬಾಲಕೃಷ್ಣನ್ ನಿರ್ದೇಶಿಸಿದ್ದಾರೆ. "ನಾನು ಅವರ ಹೇಳಿಕೆಗಳನ್ನು ದಾಖಲಿಸಲು ನಿರ್ದೇಶಿಸಿದ್ದೇನೆ, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ" ಎಂದು ಬಾಲಕೃಷ್ಣನ್ ಪ್ರತ್ಯಕ್ಷದರ್ಶಿಗಳನ್ನು ಭೇಟಿ ಮಾಡಿದ ಮೇಲೆ ವರದಿಗಾರರಿಗೆ ತಿಳಿಸಿದ್ದಾರೆ.

ಈ ಇಬ್ಬರೂ ಪ್ರತ್ಯಕ್ಷದರ್ಶಿಗಳು ತಾವಾಗಿಯೇ ಮಾನವ ಹಕ್ಕುಗಳ ಆಯೋಗದ ಮುಂದೆ ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದ ಎನ್ ಎಚ್ ಆರ್ ಸಿ ಅಧಿಕಾರಿಗಳು, ಇವರು ರಕ್ಷಣೆ ಕೋರಿದ್ದಾರೆಯೆ ಎಂಬ ಪ್ರಶ್ನೆಗೆ, ಅವರ ಹೇಳಿಕೆಗಳನ್ನು ದಾಖಲಿಸಿದ ಮೇಲೆ ಅವರಿಗೆ ರಕ್ಷಣೆ ನೀಡುವುದರ ಬಗ್ಗೆ ಚಿಂತಿಸಲಾಗುವುದು ಎಂದಿದ್ದಾರೆ.

ಪೋಲೀಸರ ಈ ಅನುಮಾನಾಸ್ಪದ ನಡೆಯ ಬಗ್ಗೆ ಆಂಧ್ರಪ್ರದೇಶ ಸರ್ಕಾರಕ್ಕೆ ನೊಟೀಸ್ ನೀಡಿರುವ ಆಯೋಗ, ಕ್ರಮ ಕೈಗೊಳ್ಳುವಂತೆ ಆಯೋಗ ಮತ್ತೆ ಮೂರು ದೂರುಗಳನ್ನು ಸ್ವೀಕರಿಸಿದೆ ಎಂದಿದೆ.

ಏಪ್ರಿಲ್ ೭ ರಂದು ತಮಿಳುನಾಡಿನಿಂದ ೨೦ ಜನರನ್ನು ರಕ್ತಚಂದನ ಕಳವು ಮಾಡುತ್ತಿದ್ದರು ಹಾಗು ಪೊಲೀಸರ ಮೇಲೆ ದಾಳಿ ನಡೆಸಿದರು ಎಂಬ ಆರೋಪದ ಮೇಲೆ ಎನ್ಕೌಂಟರ್ ಮಾಡಿ ಕೊಂದುಹಾಕಿದ್ದರು. ಚಿತ್ತೂರು ಜಿಲ್ಲೆಯ ಶೇಷಾಚಲಂ ಬೆಟ್ಟಗಳ ಅರಣ್ಯದಲ್ಲಿ ನಡೆದ ಕಾರ್ಯಾಚರಣೆಯನ್ನು ಯೋಜಿತ ಕೊಲೆ ಎಂದು ಮೃತಪಟ್ಟ ಕುಟುಂಬ ಸದಸ್ಯರು ಆರೋಪಿಸಿದ್ದರು.

ಪೊಲೀಸರು ಕೊಂದದ್ದು ರಕ್ತಚಂದನ ಕಳ್ಳಸಾಗಾಣೆದಾರರನ್ನಲ್ಲ ಆದರೆ ಕೂಲಿಗಳನ್ನು ಎಂದು ಹಲವು ರಾಜಕೀಯ ಪಕ್ಷಗಳು ದೂರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT