ಚಿತ್ತೂರು ಎನ್ಕೌಂಟರ್ ನ ಒಂದು ದೃಶ್ಯ 
ಪ್ರಧಾನ ಸುದ್ದಿ

ಚಿತ್ತೂರು ಎನ್ಕೌಂಟರ್: ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲಿಸಿದ ಎನ್ ಎಚ್ ಆರ್ ಸಿ

ಚಿತ್ತೂರು ಎನ್ಕೌಂಟರ್ ನಲ್ಲಿ ಆಂಧ್ರ ಪ್ರದೇಶದ ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ೨೦ ಜನ ಮರ ಕಡಿಯುವ ಬುಡಕಟ್ಟಿನವರ ಜೊತೆಗಿದ್ದ

ನವದೆಹಲಿ: ಚಿತ್ತೂರು ಎನ್ಕೌಂಟರ್ ನಲ್ಲಿ ಆಂಧ್ರ ಪ್ರದೇಶದ ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ೨೦ ಜನ ಮರ ಕಡಿಯುವ ಬುಡಕಟ್ಟಿನವರ ಜೊತೆಗಿದ್ದ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ದಾಖಲಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಕೆ ಜಿ ಬಾಲಕೃಷ್ಣನ್ ನಿರ್ದೇಶಿಸಿದ್ದಾರೆ. "ನಾನು ಅವರ ಹೇಳಿಕೆಗಳನ್ನು ದಾಖಲಿಸಲು ನಿರ್ದೇಶಿಸಿದ್ದೇನೆ, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ" ಎಂದು ಬಾಲಕೃಷ್ಣನ್ ಪ್ರತ್ಯಕ್ಷದರ್ಶಿಗಳನ್ನು ಭೇಟಿ ಮಾಡಿದ ಮೇಲೆ ವರದಿಗಾರರಿಗೆ ತಿಳಿಸಿದ್ದಾರೆ.

ಈ ಇಬ್ಬರೂ ಪ್ರತ್ಯಕ್ಷದರ್ಶಿಗಳು ತಾವಾಗಿಯೇ ಮಾನವ ಹಕ್ಕುಗಳ ಆಯೋಗದ ಮುಂದೆ ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದ ಎನ್ ಎಚ್ ಆರ್ ಸಿ ಅಧಿಕಾರಿಗಳು, ಇವರು ರಕ್ಷಣೆ ಕೋರಿದ್ದಾರೆಯೆ ಎಂಬ ಪ್ರಶ್ನೆಗೆ, ಅವರ ಹೇಳಿಕೆಗಳನ್ನು ದಾಖಲಿಸಿದ ಮೇಲೆ ಅವರಿಗೆ ರಕ್ಷಣೆ ನೀಡುವುದರ ಬಗ್ಗೆ ಚಿಂತಿಸಲಾಗುವುದು ಎಂದಿದ್ದಾರೆ.

ಪೋಲೀಸರ ಈ ಅನುಮಾನಾಸ್ಪದ ನಡೆಯ ಬಗ್ಗೆ ಆಂಧ್ರಪ್ರದೇಶ ಸರ್ಕಾರಕ್ಕೆ ನೊಟೀಸ್ ನೀಡಿರುವ ಆಯೋಗ, ಕ್ರಮ ಕೈಗೊಳ್ಳುವಂತೆ ಆಯೋಗ ಮತ್ತೆ ಮೂರು ದೂರುಗಳನ್ನು ಸ್ವೀಕರಿಸಿದೆ ಎಂದಿದೆ.

ಏಪ್ರಿಲ್ ೭ ರಂದು ತಮಿಳುನಾಡಿನಿಂದ ೨೦ ಜನರನ್ನು ರಕ್ತಚಂದನ ಕಳವು ಮಾಡುತ್ತಿದ್ದರು ಹಾಗು ಪೊಲೀಸರ ಮೇಲೆ ದಾಳಿ ನಡೆಸಿದರು ಎಂಬ ಆರೋಪದ ಮೇಲೆ ಎನ್ಕೌಂಟರ್ ಮಾಡಿ ಕೊಂದುಹಾಕಿದ್ದರು. ಚಿತ್ತೂರು ಜಿಲ್ಲೆಯ ಶೇಷಾಚಲಂ ಬೆಟ್ಟಗಳ ಅರಣ್ಯದಲ್ಲಿ ನಡೆದ ಕಾರ್ಯಾಚರಣೆಯನ್ನು ಯೋಜಿತ ಕೊಲೆ ಎಂದು ಮೃತಪಟ್ಟ ಕುಟುಂಬ ಸದಸ್ಯರು ಆರೋಪಿಸಿದ್ದರು.

ಪೊಲೀಸರು ಕೊಂದದ್ದು ರಕ್ತಚಂದನ ಕಳ್ಳಸಾಗಾಣೆದಾರರನ್ನಲ್ಲ ಆದರೆ ಕೂಲಿಗಳನ್ನು ಎಂದು ಹಲವು ರಾಜಕೀಯ ಪಕ್ಷಗಳು ದೂರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT