ಪ್ರಶಾಂತ್ ಭೂಷಣ್ ಮತ್ತು ಯೋಗೆಂದ್ರ ಯಾದವ್ 
ಪ್ರಧಾನ ಸುದ್ದಿ

ಭೂಷಣ್, ಯಾದವ್ ಗೆ ಶೋಕಾಸ್ ನೋಟಿಸ್ ನೀಡಿದ ಎಎಪಿ

ಭಿನ್ನಮತೀಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಾರೆ

ನವದೆಹಲಿ: ಭಿನ್ನಮತೀಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಾರೆ ಎಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಿದೆ. ಈ ನಡೆ ಸ್ವಾಭಾವಿಕ ನ್ಯಾಯದ ವಿರುದ್ಧ ಎಂದು ಯಾದವ್ ಪ್ರಶ್ನಿಸಿದ್ದರು, ಇಬ್ಬರನ್ನು ಪಕ್ಷದಿಂದ ಉಚ್ಛಾಟಿಸಲು ಇದು ಕೊನೆಯ ನಡೆ ಎನ್ನಲಾಗಿದೆ.

ಯಾದವ್, ಭೂಷಣ್, ಆನಂದ್ ಕುಮಾರ್ ಮತ್ತು ಅಜಿತ್ ಝಾ ಇವರುಗಳಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಎಎಪಿ ವಕ್ತಾರ ದೀಪಕ್ ಬಾಜಪಾಯಿ ತಿಳಿಸಿದ್ದಾರೆ. ಇವರುಗಳ ವಿರುದ್ಧ ಇರುವ ಆರೋಪಗಳನ್ನು ಸಾಕ್ಷಿ ಸಮೇತ ಪಟ್ಟಿ ಮಾಡಿದ ಅವರು "ಎರಡು ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಅವರಿಗೆ ಹೇಳಿದ್ದೇವೆ. ಇಮೇಲ್ ಪ್ರತಿಗಳನ್ನು ಅವರಿಗೆ ಕಳುಹಿಸಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಆದರೆ ಭಿನ್ನಮತೀಯ ನಾಯಕರು ನಮಗೆ ಇನ್ನೂ ಯಾವುದೇ ನೋಟಿಸ್ ಬಂದಿಲ್ಲ ಎಂದಿದ್ದಾರೆ.

ಈ ಭಿನ್ನಮತೀಯ ನಾಯಕರು 'ಸ್ವರಾಜ್ ಸಂವಾದ' ಕಾರ್ಯಕ್ರಮವನ್ನು ಆಯೋಜಿಸಿದ್ದ ಮೇಲೆ ಈ ಪ್ರಕರಣವನ್ನು ಪಕ್ಷ ರಾಷ್ಟ್ರೀಯ ಶಿಸ್ತು ಸಮಿತಿಗೆ ಪಕ್ಷ ಸೂಚಿಸಿತ್ತು.

ನಮ್ಮ ಮೇಲೆ ಆರೋಪ ಮಾಡಿರುವವರೆಲ್ಲರೂ ಶಿಸ್ತು ಸಮಿತಿಯ ಸದಸ್ಯರು ಆದುದರಿಂದ ಈ ನಡೆ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಎಂದು ಯೋಗೆಂದ್ರ ಯಾದವ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT