ಶಾಲೆಯ ಎದುರು ನಡೆದ ಪ್ರತಿಭಟನೆ 
ಪ್ರಧಾನ ಸುದ್ದಿ

ಶಾಲೆಯ ಪಾಯಿಖಾನೆ ಸ್ವಚ್ಛ ಮಾಡಲು ದಲಿತ ಮಕ್ಕಳ ಮೇಲೆ ಬಲಪ್ರಯೋಗ; ಪ್ರತಿಭಟನೆ

ಕಾಲಕ್ಕಾಡಿನ ಶಾಲೆಯೊಂದರಲ್ಲಿ ದಲಿತ ಮಕ್ಕಳಿಗೆ ಪಾಯಿಖಾನೆಯನ್ನು ಸ್ವಚ್ಛಗೊಳಿಸಲು ಅಧ್ಯಾಪಕರು ಬಲಪ್ರಯೋಗ ನಡೆಸಿರುವುದರ ವಿರುದ್ಧ ಪೋಷಕರು,

ತಿರುನೆಲ್ವೇಲಿ: ಕಾಲಕ್ಕಾಡಿನ ಶಾಲೆಯೊಂದರಲ್ಲಿ ದಲಿತ ಮಕ್ಕಳಿಗೆ ಪಾಯಿಖಾನೆಯನ್ನು ಸ್ವಚ್ಛಗೊಳಿಸಲು ಅಧ್ಯಾಪಕರು ಬಲಪ್ರಯೋಗ ನಡೆಸಿರುವುದರ ವಿರುದ್ಧ ಪೋಷಕರು, ಹಕ್ಕುಗಳ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕಾಲಕ್ಕಾಡೀನ ಬಳಿಯ ಕೀಲಾಪಥೈ ಪಂಡಿಥಂಕುರುಚಿಯ ಸರ್ಕಾರಿ ಸಹಾಯಧನದ ಶಾಲೆಯಲ್ಲಿ ಸುಮಾರು ೫೦೦ ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ೬ರಿಂದ ೮ನೆ ತರಗತಿಯ ಶಾಲೆಯ ಮಕ್ಕಳಿಗೆ ಶಾಲಾ ಅವಧಿಯಾ ನಂತರ ಪಾಯಿಖಾನೆಗಳನ್ನು ಸ್ವಚ್ಚಗೊಳಿಸುವಂತೆ ಅಧ್ಯಾಪಕರು ಬಲಪ್ರಯೋಗ ಮಾಡಿದ್ದಾರೆ. ಸ್ವಚ್ಛ ಮಾಡದೆ ಹೋದರೆ ಶಿಕ್ಷೆ ನೀಡುವುದಾಗಿ ಹೆದರಿಸಿದ್ದಾರೆ. ಕಳೆದ ಇಪ್ಪತ್ತು ದಿನಗಳಿಂದ ಇದು ನಡೆಯುತ್ತಿದ್ದರೂ ಮಕ್ಕಳು ಇತ್ತೇಚಿಗಷ್ಟೆ ತಮ್ಮ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ.

"ಇದು ನಾಲ್ಕು ವಾರಗಳಿಂದ ನಡೆಯುತ್ತಿದ್ದರೂ ನನ್ನ ಮಗ ಇಂದೆ ಇದರ ಬಗ್ಗೆ ಹೇಳಿದ್ದು" ಎಂದು ೮ನೆ ತರಗತಿಯ ವಿದ್ಯಾರ್ಥಿಯ ತಂದೆ ಹೇಳಿದ್ದಾರೆ. ಒಂದು ಮಗು ಶಾಲೆಗೆ ಹೋಗಲು ನಿರಾಕರಿಸಿದ ಮೇಲೆ, ಅವರ ಪೋಷಕರಿಗೆ ಕಾರಣ ತಿಳಿದಿದೆ. ಆಗ ಇತರ ಪೋಷಕರಿಗೂ ಇದರ ಬಗ್ಗೆ ತಿಳಿದುಬಂದಿದೆ. ನಂತರ ಪೋಷಕರು, ಹಕ್ಕುಗಳ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಜಿಲ್ಲಾ ಶೈಕ್ಷಣಿಕ ಅಧಿಕಾರಿ ಚೇರನ್ ಮಹಾದೇವಿ ಶಾಲೆಗೇ ತೆರಳಿ ಪೋಷಕರ ಜೊತೆ ಸಂಧಾನ ನಡೆಸಿದ್ದಾರೆ. ಶಾಲೆಯ ವಕ್ತಾರ ಪೋಷಕರ ಕ್ಷಮೆ ಕೋರಿದ್ದು ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT