ಶಾಲೆಯ ಎದುರು ನಡೆದ ಪ್ರತಿಭಟನೆ 
ಪ್ರಧಾನ ಸುದ್ದಿ

ಶಾಲೆಯ ಪಾಯಿಖಾನೆ ಸ್ವಚ್ಛ ಮಾಡಲು ದಲಿತ ಮಕ್ಕಳ ಮೇಲೆ ಬಲಪ್ರಯೋಗ; ಪ್ರತಿಭಟನೆ

ಕಾಲಕ್ಕಾಡಿನ ಶಾಲೆಯೊಂದರಲ್ಲಿ ದಲಿತ ಮಕ್ಕಳಿಗೆ ಪಾಯಿಖಾನೆಯನ್ನು ಸ್ವಚ್ಛಗೊಳಿಸಲು ಅಧ್ಯಾಪಕರು ಬಲಪ್ರಯೋಗ ನಡೆಸಿರುವುದರ ವಿರುದ್ಧ ಪೋಷಕರು,

ತಿರುನೆಲ್ವೇಲಿ: ಕಾಲಕ್ಕಾಡಿನ ಶಾಲೆಯೊಂದರಲ್ಲಿ ದಲಿತ ಮಕ್ಕಳಿಗೆ ಪಾಯಿಖಾನೆಯನ್ನು ಸ್ವಚ್ಛಗೊಳಿಸಲು ಅಧ್ಯಾಪಕರು ಬಲಪ್ರಯೋಗ ನಡೆಸಿರುವುದರ ವಿರುದ್ಧ ಪೋಷಕರು, ಹಕ್ಕುಗಳ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕಾಲಕ್ಕಾಡೀನ ಬಳಿಯ ಕೀಲಾಪಥೈ ಪಂಡಿಥಂಕುರುಚಿಯ ಸರ್ಕಾರಿ ಸಹಾಯಧನದ ಶಾಲೆಯಲ್ಲಿ ಸುಮಾರು ೫೦೦ ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ೬ರಿಂದ ೮ನೆ ತರಗತಿಯ ಶಾಲೆಯ ಮಕ್ಕಳಿಗೆ ಶಾಲಾ ಅವಧಿಯಾ ನಂತರ ಪಾಯಿಖಾನೆಗಳನ್ನು ಸ್ವಚ್ಚಗೊಳಿಸುವಂತೆ ಅಧ್ಯಾಪಕರು ಬಲಪ್ರಯೋಗ ಮಾಡಿದ್ದಾರೆ. ಸ್ವಚ್ಛ ಮಾಡದೆ ಹೋದರೆ ಶಿಕ್ಷೆ ನೀಡುವುದಾಗಿ ಹೆದರಿಸಿದ್ದಾರೆ. ಕಳೆದ ಇಪ್ಪತ್ತು ದಿನಗಳಿಂದ ಇದು ನಡೆಯುತ್ತಿದ್ದರೂ ಮಕ್ಕಳು ಇತ್ತೇಚಿಗಷ್ಟೆ ತಮ್ಮ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ.

"ಇದು ನಾಲ್ಕು ವಾರಗಳಿಂದ ನಡೆಯುತ್ತಿದ್ದರೂ ನನ್ನ ಮಗ ಇಂದೆ ಇದರ ಬಗ್ಗೆ ಹೇಳಿದ್ದು" ಎಂದು ೮ನೆ ತರಗತಿಯ ವಿದ್ಯಾರ್ಥಿಯ ತಂದೆ ಹೇಳಿದ್ದಾರೆ. ಒಂದು ಮಗು ಶಾಲೆಗೆ ಹೋಗಲು ನಿರಾಕರಿಸಿದ ಮೇಲೆ, ಅವರ ಪೋಷಕರಿಗೆ ಕಾರಣ ತಿಳಿದಿದೆ. ಆಗ ಇತರ ಪೋಷಕರಿಗೂ ಇದರ ಬಗ್ಗೆ ತಿಳಿದುಬಂದಿದೆ. ನಂತರ ಪೋಷಕರು, ಹಕ್ಕುಗಳ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಜಿಲ್ಲಾ ಶೈಕ್ಷಣಿಕ ಅಧಿಕಾರಿ ಚೇರನ್ ಮಹಾದೇವಿ ಶಾಲೆಗೇ ತೆರಳಿ ಪೋಷಕರ ಜೊತೆ ಸಂಧಾನ ನಡೆಸಿದ್ದಾರೆ. ಶಾಲೆಯ ವಕ್ತಾರ ಪೋಷಕರ ಕ್ಷಮೆ ಕೋರಿದ್ದು ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT