ಪ್ರಿಯಾ ವೇದಿ 
ಪ್ರಧಾನ ಸುದ್ದಿ

ಪತಿ ಸಲಿಂಗರತಿ: ಮನನೊಂದು ಫೇಸ್ಬುಕ್ ನಲ್ಲಿ ಟಿಪ್ಪಣಿ ಬರೆದು ವೈದ್ಯೆ ಆತ್ಮಹತ್ಯೆ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್) ನ ೩೧ ವರ್ಷದ ಮಹಿಳಾ ವೈದ್ಯೆಯೊಬ್ಬರು, ಅದೇ ಸಂಸ್ಥೆಯಲ್ಲಿ...

ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್) ನ ೩೧ ವರ್ಷದ ಮಹಿಳಾ ವೈದ್ಯೆಯೊಬ್ಬರು, ಅದೇ ಸಂಸ್ಥೆಯಲ್ಲಿ ವೈದ್ಯರಾಗಿದ್ದ ತಮ್ಮ ಪತಿಯ ಲೈಂಗಿಕ ಕೋನದಿಂದ ಅತೀವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಸಂಗಾತಿ ಐದು ವರ್ಷದ ಕೆಳಗೆ ಮದುವೆಯಾಗಿದ್ದರು ಹಾಗು ದಕ್ಷಿಣ ದೆಹಲಿಯ ಎಐಐಎಂಎಸ್ ವಸತಿ ಸಮುಚ್ಛಯದಲ್ಲಿ ವಾಸಿಸುತ್ತಿದ್ದರು. ಮದುವೆಯ ನಂತರ ತನ್ನ ಪತಿ ಸಲಿಂಗರತಿ ಎಂದು ತಿಳಿದಿದ್ದಾರೆ. ಆದರೆ ಆತ್ಮಹತ್ಯೆಗೂ ಮೊದಲು ಬರೆದ ಪತ್ರದಲ್ಲಿ ಅವರು ಅದನ್ನು ಒಪ್ಪಿಕೊಂಡಿದ್ದರು ಆದರೆ ತಮ್ಮ ಪತಿಯು ನೀಡುತ್ತಿದ್ದ ಕಿರುಕುಳವನ್ನು ಸಹಿಸಲಾರದೆ ಈ ಕೊನೆಯ ನಡೆಯನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

"ನೆನ್ನೆ ತಮ್ಮ ಪತಿಯ ಜೊತೆ ಜಗಳ ಮಾಡಿ ಪಹರ್ಘಂಜ್ ನ ಹೋಟೆಲೊಂದಕ್ಕೆ ಎಐಐಎಂಎಸ್ ವೈದ್ಯೆ ಪ್ರಿಯಾ ವೇದಿ ಹೋಗಿದ್ದರು. ಅಲ್ಲಿ ಅವರು ಕೈ ಕುಯ್ದುಕೊಂಡೂ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿವರವಾದ ಸಾವಿನ ಟಿಪ್ಪಣಿ ಅಲ್ಲಿ ಕಂಡಿಬಂದಿದ್ದು, ಅದನ್ನೇ ಅವರ ಫೇಸ್ಬುಕ್ ಪುಟದಲ್ಲೂ ಕೂಡ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಟಿಪ್ಪಣಿಯಲ್ಲಿ ವರದಕ್ಷಿಣೆಗಾಗಿ ಪತಿ ತಮ್ಮ ವಿರುದ್ಧ ಕಿರುಕುಳ ನೀಡುತ್ತಿದ್ದನ್ನೂ ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಪ್ರಿಯಾ ಅವರ ಪತಿ ಕಮಲ್ ವೇದಿಯವರನ್ನು(೩೪) ಬಂಧಿಸಿದ್ದು, ಐಪಿಸಿ ಸೆಕ್ಷನ್ ೪೯೮ಎ(ಹಿಂಸೆ) ಮತ್ತು ೩೦೪ಬಿ(ವರದಕ್ಷಿಣೆ ಸಂಬಂಧಿತ ಪ್ರಕರಣಗಳ ವಿಚಾರಣೆ) ಇವುಗಳಡಿ ಕೇಸು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ