ವೆಂಕಯ್ಯ ನಾಯ್ಡು 
ಪ್ರಧಾನ ಸುದ್ದಿ

ಕಾಂಗ್ರೆಸ್ ಟೀಕೆ ಭೂತ ಭಗವದ್ಗೀತೆ ಓದಿದಂತೆ: ಬಿಜೆಪಿ

ಭೂಸ್ವಾಧೀನ ಸುಗ್ರೀವಾಜ್ಞೆಯ ಬಗ್ಗೆ ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಹರಡುತ್ತಿದೆ ಎಂದು ದೂರಿರುವ ಬಿಜೆಪಿ ಪಕ್ಷ,

ನವದೆಹಲಿ: ಭೂಸ್ವಾಧೀನ ಸುಗ್ರೀವಾಜ್ಞೆಯ ಬಗ್ಗೆ ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಹರಡುತ್ತಿದೆ ಎಂದು ದೂರಿರುವ ಬಿಜೆಪಿ ಪಕ್ಷ, ಈ ಕಾಯ್ದೆಯ ವಿರುದ್ಧದ ಕಾಂಗ್ರೆಸ್ ಟೀಕೆ 'ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ' ಎಂದು ಕುಹಕವಾಡಿದೆ.

ಹಿಂದಿನ ಕಾಂಗ್ರೆಸ್ ಆಡಳಿತದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಪಕ್ಷ ಈ ಹಿಂದೆ ಕಾಂಗ್ರೆಸ್ ಹಲವಾರು ಸುಗ್ರೀವಾಜ್ಞೆಗಳನ್ನು ಜಾರಿಗೆ ತಂದಿದೆ, ಆಗ ವಿರೋಧ ಪಕ್ಷಗಳಿಗೆ "ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಕರೆಯುವ ಹಕ್ಕು ವಿರೋಧಪಕ್ಷಗಳಿಗಿರಲಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಈ ಹಿಂದೆ ಹೊರಡಿಸಿರುವ ಕಾಯ್ದೆಗಳ ಬಗ್ಗೆ ತರಾಟೆಗೆ ತೆಗೆದುಕೊಳ್ಳುವಂತೆ ಬಿಜೆಪಿ ಪಕ್ಷ ಸದಸ್ಯರಿಗೆ ಕರೆಕೊಟ್ಟಿದೆ.

"ಕಾಂಗ್ರೆಸ್ ಪಕ್ಷ ಸುಗ್ರೀವಾಜ್ಞೆಯನ್ನು ವಿರೋಧಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ. ಅವರ ಆಡಳಿತದ ಸಮಯದಲ್ಲಿ ೪೫೬ ಸುಗ್ರೀವಾಜ್ಞೆಗಳನ್ನು ಹೊರಡಿಸಿದ್ದಾರೆ" ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಜವಹರಲಾಲ್ ನೆಹರೂ ಸಮಯದಲ್ಲಿ ೭೭ ಸುಗ್ರೀವಾಜ್ಞೆಗಳು, ಇಂದಿರಾ ಗಾಂಧಿ ಅವರ ಆರು ವರ್ಷಗಳ ಆಡಳಿತದ ಸಮಯದಲ್ಲಿ ೭೭ ಸುಗ್ರೀವಾಜ್ಞೆಗಳನ್ನು, ನಂತರ ಅವರ ಆಡಳಿತದಲ್ಲೇ ಪ್ರತಿ ತಿಂಗಳಿಗೆ ೩ ಸುಗ್ರೀವಾಜ್ಞೆಗಳು, ರಾಜೀವ ಗಾಂಧಿ ಆಡಳಿತದಲ್ಲಿ ೩೫ ಸುಗ್ರೀವಾಜ್ಞೆಗಳನ್ನು ಹೊರಡಿಸಿದ್ದಾರೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT